ಸದಾ ಕ್ರಿಯಾಶೀಲ ವ್ಯಕ್ತಿತ್ವದ ಶ್ರೀ ರಾಮಕೃಷ್ಣ ಮಯ್ಯ ಸಾರಥ್ಯದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕಾಸರಗೋಡು ಇವರು ಯಕ್ಷಕಲಾ ಪೋಷಕರ ಸಹಕಾರದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ದಿನಾಂಕ 10.09.2020 ರ ಗುರುವಾರ ರಾತ್ರಿ ಘಂಟೆ 9ರಿಂದ ದೇವಿದಾಸ ಕವಿಯ ಕೃಷ್ಣಸಂಧಾನ ಪ್ರಸಂಗದ ಒಂದು ಭಾಗವನ್ನು ಸಂಯೋಜಿಸಿದ ‘ ಕರ್ಮಣ್ಯೇವಾಧಿಕಾರಸ್ತೇ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ.
ಏನಾದರೂ ಮಾಡುತ್ತಲೇ ಇರಬೇಕೆಂಬ ತುಡಿತವನ್ನು ಹೊಂದಿದ ಖ್ಯಾತ ಭಾಗವತರಾದ ರಾಮಕೃಷ್ಣ ಮಯ್ಯರ ನೇತೃತ್ವದ ಈ ಕಲಾವಿದರು ಈ ಪ್ರದರ್ಶನವನ್ನು ನೀಡಲಿದ್ದಾರೆ. ಈ ಪ್ರದರ್ಶನ sv vision ಯು ಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.