Saturday, May 18, 2024
Homeಯಕ್ಷಗಾನಎಡನೀರು ಶ್ರೀಗಳವರಿಗೆ ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ನುಡಿನಮನ

ಎಡನೀರು ಶ್ರೀಗಳವರಿಗೆ ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ನುಡಿನಮನ

ಪರಮಾತ್ಮನಲ್ಲಿ ಐಕ್ಯರಾದ ಎಡನೀರು ಮಠಾಧೀಶರಾದ ಶ್ರೀಶ್ರೀ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿಯವರಿಗೆ ಕೋಟೂರು ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ನುಡಿನಮನ ಸಮರ್ಪಿಸಿ ಅವರ ದಿವ್ಯಾತ್ಮಕ್ಕೆ ಚಿರ ಶಾಂತಿ ದೊರೆಯುವಂತೆ ಪ್ರಾರ್ಥಿಸಲಾಯಿತು.ಕೋವಿದ್ 19 ರ ಮಾನದಂಡಗಳನ್ನು ಪಾಲಿಸಿಕೊಂಡು ಸಭೆ ಜರಗಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ಟರ ಮನೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಸುಬ್ರಹ್ಮಣ್ಯ ಅಡ್ಕ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು. ಹಿರಿಯ ಯಕ್ಷಗಾನ ಭಾಗವತ ಶ್ರೀ ಹೊಸಮೂಲೆ ಗಣೇಶ ಭಟ್  ಅವರು ಪಾಲ್ಗೊಂಡರು. ಶ್ರೀ ಸ್ವಾಮೀಜಿಯವರ ಪೂರ್ವಾಶ್ರಮದಿಂದಲೇ ಅವರ ಒಡನಾಡಿಯಾಗಿದ್ದು ಶ್ರೀ ಮಠದ ಎಲ್ಲಾ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿದ್ದ ಹಿರಿಯ ಯಕ್ಷಗಾನ ಕಲಾವಿದ ಶ್ರೀ ಅಡ್ಕ ಗೋಪಾಲಕೃಷ್ಣ ಭಟ್ಟರು ಗುರುಗಳ ಒಡನಾಟವನ್ನು ನೆನಪಿಸುತ್ತಾ, ಅವರ ಅಗಲುವಿಕೆ ತುಂಬಲಾರದ ನಷ್ಟ ಎಂದು ನುಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಗೋವಿಂದ ಬಳ್ಳಮೂಲೆ, ಉಪಾಧ್ಯಕ್ಷ ರಾಘವೇಂದ್ರ ಭಟ್ ಉಡುಪುಮೂಲೆ, ಸಹಕಾರ್ಯದರ್ಶಿ ಡಾ. ಶಿವಕುಮಾರ್ ಅಡ್ಕ, ಅನುಪಮಾ ರಾಘವೇಂದ್ರ ಉಡುಪುಮೂಲೆ ನುಡಿನಮನಗಳನ್ನು ಅರ್ಪಿಸಿದರು.ಕೋಶಾಧಿಕಾರಿ ಕೃಷ್ಣ ಭಟ್ ಅಡ್ಕ ಸ್ವಾಗತಿಸಿ ಕಾರ್ಯದರ್ಶಿ ಮುರಳಿಕೃಷ್ಣ ಸ್ಕಂದ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಸುಮತಿ ಗೋಪಾಲಕೃಷ್ಣ ಭಟ್ ಅಡ್ಕ, ಪ್ರೇಮಲತಾ ಕೃಷ್ಣ ಭಟ್ ಅಡ್ಕ, ಅನಿರುದ್ಧ ವಾಸಿಷ್ಠ ಶರ್ಮಾ ಉಡುಪುಮೂಲೆ, ಶ್ರೀರಾಮ ಅಡ್ಕ, ಕೃಷ್ಣಕುಮಾರ ಅಡ್ಕ ಉಪಸ್ಥಿತರಿದ್ದರು

  • ಯಕ್ಷತೂಣೀರ ಸಂಪ್ರತಿಷ್ಠಾನ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments