Saturday, May 18, 2024
Homeಯಕ್ಷಗಾನಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಶ್ರೀ ಎಂ. ದಾಮೋದರ ಶೆಟ್ಟಿ ಮಜಿಬೈಲ್ ಆಯ್ಕೆ

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಶ್ರೀ ಎಂ. ದಾಮೋದರ ಶೆಟ್ಟಿ ಮಜಿಬೈಲ್ ಆಯ್ಕೆ

ಕಾಸರಗೋಡು ಜಿಲ್ಲಾ ಬಂಟರ ಸಂಘದ ಗೌರವ ಕಾರ್ಯದರ್ಶಿಯಾಗಿ,ಬಂಟ್ಸ್ ಮಜಿಬೈಲ್ ನ ಸಲಹೆಗಾರರಾಗಿ ಗೌರವ ಮಾರ್ಗದರ್ಶಕರಾಗಿ,ಮಂಜೇಶ್ವರ ಜಯ-ವಿಜಯ ಜೋಡುಕರೆ ಕಂಬಳದ ಮಾಜಿ ಅಧ್ಯಕ್ಷರಾಗಿ,ಬಲ್ಲಂಗುಡೇಲ್ ಶ್ರೀ ಪಾಡಂಗರೇ ಭಗವತಿ ಕ್ಷೇತ್ರದ ಕಳಿಯಾಟ ಸಂದರ್ಭದಲ್ಲಿ ಸತತ ನಲ್ವತೈದು ವರ್ಷದಿಂದ ಸ್ವಂತ ವೆಚ್ಚದಲ್ಲಿ ಯಕ್ಷಗಾನ ಕಾರ್ಯಕ್ರಮ ಆಯೋಜನೆ ಹಾಗು ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ನ್ಯಾ. ಎಂ ದಾಮೋದರ ಶೆಟ್ಟಿಯವರನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾದ ಇವರನ್ನು ಹಾಗು ಆಯ್ಕೆ ಮಾಡಿದ ಕರ್ನಾಟಕ ಸರಕಾರದ ಸಚಿವರಾದ ಸಿಟಿ ರವಿ ಯವರನ್ನು ಬಂಟ್ಸ್ ಮಜಿಬೈಲ್ ಸಂಸ್ಥೆ ಅಭಿನಂದನೆ ಸಲ್ಲಿಸಿದೆ. ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಅವರಿಗೆ ಹುಟ್ಟೂರಲ್ಲಿ ವಿಶೇಷವಾಗಿ ಗೌರವ ಅಭಿನಂದನೆಗಳನ್ನು ಸಲ್ಲಿಸಲಾಯಿತು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments