Friday, September 20, 2024
Homeಯಕ್ಷಗಾನಬಲಿಪ ನಾರಾಯಣ ಭಾಗವತರ ಮುಕುಟಕ್ಕೆ  'ಯಕ್ಷ ಜನಾರ್ದನ ಪ್ರಶಸ್ತಿ'ಯ ಗರಿ ('Yaksha Janardana Award' to Balipa...

ಬಲಿಪ ನಾರಾಯಣ ಭಾಗವತರ ಮುಕುಟಕ್ಕೆ  ‘ಯಕ್ಷ ಜನಾರ್ದನ ಪ್ರಶಸ್ತಿ’ಯ ಗರಿ (‘Yaksha Janardana Award’ to Balipa Narayana Bhagavatha)

ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಮೇರು ಭಾಗವತ ಶ್ರೀ ಬಲಿಪ ನಾರಾಯಣ ಭಾಗವತರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಿಯಲ್ಲಿ ಉಜಿರೆಯ ಯಕ್ಷಜನ ಸಭಾ ವತಿಯಿಂದ ಮೊದಲ ‘ಯಕ್ಷ ಜನಾರ್ದನ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗಿದೆ. ಇಂದಿನಿಂದ ಅಂದರೆ ದಿನಾಂಕ ೦೨. ೧೦. ೨೦೨೦ ರ ಶುಕ್ರವಾರದಿಂದ ನಡೆಯುತ್ತಿರುವ ಮೂರು ದಿನದ ತಾಳಮದ್ದಳೆ ‘ಯಕ್ಷೋತ್ಸವ’ದ  ಮೊದಲ ದಿನವಾದ ಇಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬಲಿಪ ಭಾಗವತರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ತಮ್ಮ ವೃತ್ತಿಬದುಕಿನಲ್ಲಿ ಹಲವಾರು ಪ್ರಶಸ್ತಿ ಸನ್ಮಾನಗಳನ್ನು ಪಡೆದ ಬಲಿಪ ನಾರಾಯಣ ಭಾಗವತರು ಈ ಚೊಚ್ಚಲ ‘ಯಕ್ಷ ಜನಾರ್ದನ ಪ್ರಶಸ್ತಿ’ಯನ್ನೂ ತಮ್ಮ ಮುಡಿಗೇರಿಸಿಕೊಂಡರು. ಉಜಿರೆಯ ಯಕ್ಷಜನ ಸಭಾದ ಗೌರವಾಧ್ಯಕ್ಷ ಶ್ರೀ ಶ್ರೀ ಶರತ್ ಪಡುವೆಟ್ನಾಯ, ಅಧ್ಯಕ್ಷ ಡಾ.ದಯಾಕರ್, ಉಪಾಧ್ಯಕ್ಷರಾದ ಭುಜಬಲಿ, ಕಾರ್ಯದರ್ಶಿ ಬಿ.ವಿ.ರಾವ್ ಮೊದಲಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments