ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ನಾಳೆ ದಿನಾಂಕ 10.10.2020 ನೇ ಶನಿವಾರ ಮಧ್ಯಾಹ್ನ 2.30 ಕ್ಕೆ ಸರಿಯಾಗಿ ಪುತ್ತೂರಿನ ಬಾಲವನದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಬಾಲವನ’ ಪ್ರಶಸ್ತಿಯನ್ನು ಪ್ರೊ| ಅಮೃತ ಸೋಮೇಶ್ವರ ಅವರಿಗೆ ನೀಡಲಾಗುವುದು. ಪ್ರಶಸ್ತಿ ಪ್ರಧಾನ ಸಮಾರಂಭದ ಅನಂತರ ‘ಶ್ರೀಕೃಷ್ಣ ಸಂಧಾನ – ಭೀಷ್ಮ ಸೇನಾಧಿಪತ್ಯ’ ಎಂಬ ತಾಳಮದ್ದಳೆ ನಡೆಯಲಿದೆ. ತಾಳಮದ್ದಳೆಯಲ್ಲಿ ಪ್ರಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿದೆ.
