ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ನಿಡ್ಲೆ ಗೋವಿಂದ ಭಟ್ ಅವರೊಂದಿಗೆ ಮಾತುಕತೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ. ಸಂಜೆ ಘಂಟೆ 6.30ರಿಂದ 7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ. ಮಾತಿನ ಮಂಟಪ ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ.

ಬಹಳ ಖುಷಿ ಕೊಟ್ಟಿದೆ ಭಟ್ಟರೊಂದಿಗಿನ ಮಾತುಕಥೆ, ಒಳ್ಳೆ ಒಡನಾಡಿ ಸಂಘಟಕ ,ಅಧ್ಬುತ ಕಲಾವಿದ ಕೂಡ ಅಭಿನಂದನೆಗಳು.