ನಾಳೆ 20-10-2020 ರಂದು ಮಂಗಳವಾರ ಸಂಜೆ 5.30 ಗಂಟೆಗೆ ಉಡುಪಿ ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ (ರಿ.),ಅಂಬಲಪಾಡಿ ಇದರ ಸಹಯೋಗದೊಂದಿಗೆ ನಮ್ಮನ್ನಗಲಿದ ಗುರು ಹಿರಿಯಡ್ಕ ಗೋಪಾಲ ರಾಯರಿಗೆ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಅವರ ಶಿಷ್ಯರಿಗೆ ಮತ್ತು ಅಭಿಮಾನಿಗಳಿಗೆ ಸ್ವಾಗತ ಎಂಬುದಾಗಿ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
