ಶೀರ್ಷಿಕೆಯೇ ಸೂಚಿಸುವಂತೆ ಈ ಹೊತ್ತಗೆಯು ಸಾಲಿಗ್ರಾಮ ಮಕ್ಕಳ ಮೇಳದ ರಜತ ಸಂಚಿಕೆಯಾಗಿ 2002ರಲ್ಲಿ ಪ್ರಕಟವಾಗಿತ್ತು. ‘ಬಾಲಗೋಪಾಲ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಈ ರಜತ ಸಂಚಿಕೆಯು ನೂರಾ ಅರುವತ್ತನಾಲ್ಕು ಪುಟಗಳಿಂದ ಕೂಡಿದೆ.
ಈ ಕೃತಿಯ ಪ್ರಕಾಶಕರು ಸಾಲಿಗ್ರಾಮ ಮಕ್ಕಳ ಮೇಳ (ರಿ), ಪಟೇಲರ ಮನೆ, ಕೋಟ. ಪ್ರಧಾನ ಸಂಪಾದಕರು ಪ್ರೊ| ಸಿ. ಉಪೇಂದ್ರ ಸೋಮಯಾಜಿ. ಗೌರವ ಸಂಪಾದಕರು ಶ್ರೀ ಕೆ.ಎಂ.ಉಡುಪ,ಮಂದಾರ್ತಿ. ಈ ರಜತ ಸಂಚಿಕೆಯನ್ನು ಮಕ್ಕಳ ಮೇಳದ ಪ್ರಧಾನ ರೂವಾರಿ, ರಾಜ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿದ್ದ ಕಾರ್ಕಡ ಶ್ರೀನಿವಾಸ ಉಡುಪರಿಗೆ ಅರ್ಪಿಸಲಾಗಿದೆ.

ಸಂಪಾದಕ ಪ್ರೊ| ಸಿ. ಉಪೇಂದ್ರ ಸೋಮಯಾಜಿ ಅವರು ‘ಮೊದಲ ಮಾತು’ ಎಂಬ ತಮ್ಮ ಲೇಖನದಲ್ಲಿ ಅನಿಸಿಕೆಗಳನ್ನು ತಿಳಿಸಿ, ಸಹಕರಿಸಿದವರಿಗೆಲ್ಲಾ ಕೃತಜ್ಞತೆಗಳನ್ನು ತಿಳಿಸಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆ, ಶ್ರೀ ಕೆ.ಕೆ.ಪೈ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ಕೆ.ಜಯಪ್ರಕಾಶ ಹೆಗ್ಡೆ ಅವರುಗಳ ಶುಭಸಂದೇಶಗಳನ್ನೂ ನೀಡಲಾಗಿದೆ.

ಬಳಿಕ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಶ್ರೀಧರ ಉಪ್ಪೂರು, ಡಾ. ಸಿ.ಆನಂದರಾಮ ಉಪಾಧ್ಯ, ಕಂದಾವರ ರಘುರಾಮ ಶೆಟ್ಟಿ, ಎಚ್.ಸುಬ್ಬಣ್ಣ ಭಟ್ಟ, ಪ್ರೊ| ಉದ್ಯಾವರ ಮಾಧವ ಆಚಾರ್ಯ, ಕೆ. ಮೋಹನ್, ಎಂ. ಸುಧೀಂದ್ರ ಹೊಳ್ಳ, ಕಾರ್ಕಡ ರಾಮಚಂದ್ರ ಉಡುಪ, ಪಿ.ವಿ.ಐತಾಳ, ಮಣೂರು ನರಸಿಂಹ ಮಧ್ಯಸ್ಥ, ಡಾ.ಎಂ.ಪ್ರಭಾಕರ ಜೋಶಿ, ಎಚ್. ಸುಜಯಿಂದ್ರ ಹಂದೆ, ಅಂಬಾತನಯ ಮುದ್ರಾಡಿ, ಡಾ. ಆರ್. ಗಣೇಶ್ ಶತಾವಧಾನಿ, ಕೆ.ಎಂ.ರಾಘವ ನಂಬಿಯಾರ್, ಪ್ರೊ| ಸಿ. ಉಪೇಂದ್ರ ಸೋಮಯಾಜಿ,
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಸ್ವಾಮಿ ಪುರುಷೋತ್ತಮಾನಂದ, ಗಿರೀಶ ಕಾಸರವಳ್ಳಿ, ಡಾ| ಎಚ್.ಕೆ.ರಂಗನಾಥ್, ಡಾ| ಭಾನುಮತಿ, ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಜಾನ್ ಆರ್. ಮರ್, ಕೂರಾಡಿ ಸದಾಶಿವ ಕಲ್ಕೂರ, ದಯಾನಂದ ಬಳ್ಕೂರು, ಬಿ. ರಮೇಶ್ ಭಟ್, ಕೆ.ಎಂ. ಉಡುಪ, ಎಚ್.ಶ್ರೀಧರ ಹಂದೆ, ಇವರುಗಳ ಲೇಖನಗಳನ್ನು ನೀಡಲಾಗಿದೆ.
ಪುಸ್ತಕ ಪರಿಚಯ: ರವಿಶಂಕರ್ ವಳಕ್ಕುಂಜ

