Friday, September 20, 2024
Homeಸುದ್ದಿಜಿಲ್ಲೆದೇರಾಜೆಯವರ ಮಹತ್ತರ ಕೃತಿ 'ಕುರುಕ್ಷೇತ್ರಕ್ಕೊಂದು ಆಯೋಗ' ಪುಸ್ತಕ ಧರ್ಮಸ್ಥಳದಲ್ಲಿ ತೃತೀಯ ಮುದ್ರಣ 

ದೇರಾಜೆಯವರ ಮಹತ್ತರ ಕೃತಿ ‘ಕುರುಕ್ಷೇತ್ರಕ್ಕೊಂದು ಆಯೋಗ’ ಪುಸ್ತಕ ಧರ್ಮಸ್ಥಳದಲ್ಲಿ ತೃತೀಯ ಮುದ್ರಣ 

ದೇರಾಜೆ ಸೀತಾರಾಮಯ್ಯನವರ ವಿಶಿಷ್ಟ ಕೃತಿ ‘ಕುರುಕ್ಷೇತ್ರಕ್ಕೊಂದು ಆಯೋಗ’ ಪುಸ್ತಕವು ತನ್ನ ತೃತೀಯ ಮುದ್ರಣದ ಸೌಭಾಗ್ಯವನ್ನು ಕಂಡಿದೆ.

ಖ್ಯಾತ ಸಾಹಿತಿಯೂ, ವಿದ್ವಾಂಸರೂ, ತಾಳಮದ್ದಳೆ ಅರ್ಥಧಾರಿಗಳೂ ಆಗಿದ್ದ ದಿ| ದೇರಾಜೆ ಸೀತಾರಾಮಯ್ಯನವರ ಈ ಕೃತಿಯು ಕನ್ನಡ ಸಾರಸ್ವತ ಲೋಕಕ್ಕೊಂದು ಅಮೂಲ್ಯ ಕೊಡುಗೆಯಾಗಿತ್ತು. ಮಹಾಭಾರತ ಪುರಾಣ ಕಥೆಯ ಪಾತ್ರಗಳ ಒಳಹೊಕ್ಕು ನೋಡಿ ಅದನ್ನು ಅತಿ ವಿಶಿಷ್ಟವಾಗಿ ಅಭಿವ್ಯಕ್ತಿಗೊಳಿಸಿದ ಹಾಗೂ ಪುರಾಣ ಘಟನೆಗಳನ್ನು ವಿಮರ್ಶಾತ್ಮಕವಾಗಿ ಅದರ ಮೇಲೆ ಹೊಸತನದ ಬೆಳಕನ್ನು ಚಿತ್ರಿಸಿದ ದೇರಾಜೆ ಸೀತಾರಾಮಯ್ಯನವರ ಕೃತಿಯೇ ‘ಕುರುಕ್ಷೇತ್ರಕ್ಕೊಂದು ಆಯೋಗ’.

ಮೂರನೇ ಮುದ್ರಣವನ್ನು ಬಿಡುಗಡೆಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಇಂತಹಾ ಗ್ರಂಥಗಳಿಂದ ಧಾರ್ಮಿಕ ಜಾಗೃತಿಯು ಪ್ರಚೋದಿಸಲ್ಪಡುತ್ತದೆ ಎಂದು ಶುಭ ಹಾರೈಸಿದರು.

ಈ ಪುಸ್ತಕವು ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ನಲ್ಲಿ ಇದೀಗ ಮುದ್ರಣಗೊಡಿದೆ. ಮುಂಬೈಯ ಉದ್ಯಮಿ ಕೊಳಚೂರುಗುತ್ತು ಜಗನ್ನಾಥ ಎನ್. ಶಟ್ಟಿ ಹಾಗೂ ಅವರ ಪತ್ನಿ, ಮಗ, ಸೊಸೆ ಹಾಗೂ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ, ಡಾ. ಶ್ರೀನಾಥ್ ಎಂ.ಪಿ ಕಾರ್ಯಕ್ರಮದಲ್ಲಿ ಹಾಜರಿದ್ದರು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments