ದೇರಾಜೆ ಸೀತಾರಾಮಯ್ಯನವರ ವಿಶಿಷ್ಟ ಕೃತಿ ‘ಕುರುಕ್ಷೇತ್ರಕ್ಕೊಂದು ಆಯೋಗ’ ಪುಸ್ತಕವು ತನ್ನ ತೃತೀಯ ಮುದ್ರಣದ ಸೌಭಾಗ್ಯವನ್ನು ಕಂಡಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಖ್ಯಾತ ಸಾಹಿತಿಯೂ, ವಿದ್ವಾಂಸರೂ, ತಾಳಮದ್ದಳೆ ಅರ್ಥಧಾರಿಗಳೂ ಆಗಿದ್ದ ದಿ| ದೇರಾಜೆ ಸೀತಾರಾಮಯ್ಯನವರ ಈ ಕೃತಿಯು ಕನ್ನಡ ಸಾರಸ್ವತ ಲೋಕಕ್ಕೊಂದು ಅಮೂಲ್ಯ ಕೊಡುಗೆಯಾಗಿತ್ತು. ಮಹಾಭಾರತ ಪುರಾಣ ಕಥೆಯ ಪಾತ್ರಗಳ ಒಳಹೊಕ್ಕು ನೋಡಿ ಅದನ್ನು ಅತಿ ವಿಶಿಷ್ಟವಾಗಿ ಅಭಿವ್ಯಕ್ತಿಗೊಳಿಸಿದ ಹಾಗೂ ಪುರಾಣ ಘಟನೆಗಳನ್ನು ವಿಮರ್ಶಾತ್ಮಕವಾಗಿ ಅದರ ಮೇಲೆ ಹೊಸತನದ ಬೆಳಕನ್ನು ಚಿತ್ರಿಸಿದ ದೇರಾಜೆ ಸೀತಾರಾಮಯ್ಯನವರ ಕೃತಿಯೇ ‘ಕುರುಕ್ಷೇತ್ರಕ್ಕೊಂದು ಆಯೋಗ’.

ಮೂರನೇ ಮುದ್ರಣವನ್ನು ಬಿಡುಗಡೆಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಇಂತಹಾ ಗ್ರಂಥಗಳಿಂದ ಧಾರ್ಮಿಕ ಜಾಗೃತಿಯು ಪ್ರಚೋದಿಸಲ್ಪಡುತ್ತದೆ ಎಂದು ಶುಭ ಹಾರೈಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ಪುಸ್ತಕವು ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ನಲ್ಲಿ ಇದೀಗ ಮುದ್ರಣಗೊಡಿದೆ. ಮುಂಬೈಯ ಉದ್ಯಮಿ ಕೊಳಚೂರುಗುತ್ತು ಜಗನ್ನಾಥ ಎನ್. ಶಟ್ಟಿ ಹಾಗೂ ಅವರ ಪತ್ನಿ, ಮಗ, ಸೊಸೆ ಹಾಗೂ ಶಾಂತಿವನ ಟ್ರಸ್ಟಿನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ, ಡಾ. ಶ್ರೀನಾಥ್ ಎಂ.ಪಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

