‘ಪಾರ್ತಿಸುಬ್ಬ’ ಎಂಬ ಹೆಸರು ಯಕ್ಷಗಾನದ ತಿಳುವಳಿಕೆಯುಳ್ಳ ಮಂದಿಯ ಹೃದಯದಲ್ಲಿ ಪುಳಕವನ್ನೆಬ್ಬಿಸಬಹುದು. ಯಕ್ಷಗಾನದ ಜನಕ ಎಂದೇ ಕರೆಯಲ್ಪಡುವ ಪಾರ್ತಿಸುಬ್ಬನ ಊರಾದ ಕಾಸರಗೋಡು ಜಿಲ್ಲೆಯ ಕುಂಬಳೆಯು ಪಾರ್ತಿಸುಬ್ಬನ ಹೆಸರಿನಿಂದ ಗುರುತಿಸಲ್ಪಟ್ಟಿದೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಯಕ್ಷಗಾನ ಕವಿ, ಕಲಾವಿದನೂ ಆದ ಪಾರ್ತಿಸುಬ್ಬನ ಸ್ಮರಣಾರ್ಥ ಕುಂಬಳೆಯ ರಸ್ತೆಯೊಂದಕ್ಕೆ ಅವರ ಹೆಸರನ್ನು ಇಡಲಾಗಿದೆ. ಕುಂಬಳೆಯ ಪೊಲೀಸ್ ಠಾಣೆಯ ಸಮೀಪದ ರಸ್ತೆಯೊಂದಕ್ಕೆ ಪಾರ್ತಿಸುಬ್ಬನ ಹೆಸರನ್ನು ಇಡಲಾಗಿದೆ. ಈ ರಸ್ತೆಯನ್ನು ‘ಯಕ್ಷಕವಿ ಪಾರ್ತಿಸುಬ್ಬ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ.

ಈ ರಸ್ತೆಯ ನಾಮಫಲಕವನ್ನು ಕುಂಬಳೆಯಲ್ಲಿ ಅನಾವರಣಗೊಳಿಸಲಾಯಿತು. ಕುಂಬಳೆ ಗ್ರಾಮಪಂಚಾಯತ್ ಈ ರಸ್ತೆಗೆ ಯಕ್ಷಕವಿ ಪಾರ್ತಿಸುಬ್ಬ ರಸ್ತೆ ಎಂದು ನಾಮಕರಣ ಮಾಡಲು ಅಧಿಕೃತವಾಗಿ ಒಪ್ಪಿಗೆ ನೀಡಿತ್ತು.

ಈ ರಸ್ತೆಯ ನಾಮಫಲಕದ ಅನಾವರಣವನ್ನು ಕುಂಬಳೆ ಪಂಚಾಯತ್ ಅಧ್ಯಕ್ಷ ಶ್ರೀ ಪುಂಡರೀಕಾಕ್ಷ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇನ್ನಿತರ ಪಂಚಾಯತ್ ಸದಸ್ಯರು, ಪಟ್ಲ ಸತೀಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಘವೇಂದ್ರ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.