‘ಪಾರ್ತಿಸುಬ್ಬ’ ಎಂಬ ಹೆಸರು ಯಕ್ಷಗಾನದ ತಿಳುವಳಿಕೆಯುಳ್ಳ ಮಂದಿಯ ಹೃದಯದಲ್ಲಿ ಪುಳಕವನ್ನೆಬ್ಬಿಸಬಹುದು. ಯಕ್ಷಗಾನದ ಜನಕ ಎಂದೇ ಕರೆಯಲ್ಪಡುವ ಪಾರ್ತಿಸುಬ್ಬನ ಊರಾದ ಕಾಸರಗೋಡು ಜಿಲ್ಲೆಯ ಕುಂಬಳೆಯು ಪಾರ್ತಿಸುಬ್ಬನ ಹೆಸರಿನಿಂದ ಗುರುತಿಸಲ್ಪಟ್ಟಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಯಕ್ಷಗಾನ ಕವಿ, ಕಲಾವಿದನೂ ಆದ ಪಾರ್ತಿಸುಬ್ಬನ ಸ್ಮರಣಾರ್ಥ ಕುಂಬಳೆಯ ರಸ್ತೆಯೊಂದಕ್ಕೆ ಅವರ ಹೆಸರನ್ನು ಇಡಲಾಗಿದೆ. ಕುಂಬಳೆಯ ಪೊಲೀಸ್ ಠಾಣೆಯ ಸಮೀಪದ ರಸ್ತೆಯೊಂದಕ್ಕೆ ಪಾರ್ತಿಸುಬ್ಬನ ಹೆಸರನ್ನು ಇಡಲಾಗಿದೆ. ಈ ರಸ್ತೆಯನ್ನು ‘ಯಕ್ಷಕವಿ ಪಾರ್ತಿಸುಬ್ಬ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ.
ಈ ರಸ್ತೆಯ ನಾಮಫಲಕವನ್ನು ಕುಂಬಳೆಯಲ್ಲಿ ಅನಾವರಣಗೊಳಿಸಲಾಯಿತು. ಕುಂಬಳೆ ಗ್ರಾಮಪಂಚಾಯತ್ ಈ ರಸ್ತೆಗೆ ಯಕ್ಷಕವಿ ಪಾರ್ತಿಸುಬ್ಬ ರಸ್ತೆ ಎಂದು ನಾಮಕರಣ ಮಾಡಲು ಅಧಿಕೃತವಾಗಿ ಒಪ್ಪಿಗೆ ನೀಡಿತ್ತು.
ಈ ರಸ್ತೆಯ ನಾಮಫಲಕದ ಅನಾವರಣವನ್ನು ಕುಂಬಳೆ ಪಂಚಾಯತ್ ಅಧ್ಯಕ್ಷ ಶ್ರೀ ಪುಂಡರೀಕಾಕ್ಷ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇನ್ನಿತರ ಪಂಚಾಯತ್ ಸದಸ್ಯರು, ಪಟ್ಲ ಸತೀಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಘವೇಂದ್ರ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.