‘ಪಾರ್ತಿಸುಬ್ಬ’ ಎಂಬ ಹೆಸರು ಯಕ್ಷಗಾನದ ತಿಳುವಳಿಕೆಯುಳ್ಳ ಮಂದಿಯ ಹೃದಯದಲ್ಲಿ ಪುಳಕವನ್ನೆಬ್ಬಿಸಬಹುದು. ಯಕ್ಷಗಾನದ ಜನಕ ಎಂದೇ ಕರೆಯಲ್ಪಡುವ ಪಾರ್ತಿಸುಬ್ಬನ ಊರಾದ ಕಾಸರಗೋಡು ಜಿಲ್ಲೆಯ ಕುಂಬಳೆಯು ಪಾರ್ತಿಸುಬ್ಬನ ಹೆಸರಿನಿಂದ ಗುರುತಿಸಲ್ಪಟ್ಟಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಯಕ್ಷಗಾನ ಕವಿ, ಕಲಾವಿದನೂ ಆದ ಪಾರ್ತಿಸುಬ್ಬನ ಸ್ಮರಣಾರ್ಥ ಕುಂಬಳೆಯ ರಸ್ತೆಯೊಂದಕ್ಕೆ ಅವರ ಹೆಸರನ್ನು ಇಡಲಾಗಿದೆ. ಕುಂಬಳೆಯ ಪೊಲೀಸ್ ಠಾಣೆಯ ಸಮೀಪದ ರಸ್ತೆಯೊಂದಕ್ಕೆ ಪಾರ್ತಿಸುಬ್ಬನ ಹೆಸರನ್ನು ಇಡಲಾಗಿದೆ. ಈ ರಸ್ತೆಯನ್ನು ‘ಯಕ್ಷಕವಿ ಪಾರ್ತಿಸುಬ್ಬ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ.

ಈ ರಸ್ತೆಯ ನಾಮಫಲಕವನ್ನು ಕುಂಬಳೆಯಲ್ಲಿ ಅನಾವರಣಗೊಳಿಸಲಾಯಿತು. ಕುಂಬಳೆ ಗ್ರಾಮಪಂಚಾಯತ್ ಈ ರಸ್ತೆಗೆ ಯಕ್ಷಕವಿ ಪಾರ್ತಿಸುಬ್ಬ ರಸ್ತೆ ಎಂದು ನಾಮಕರಣ ಮಾಡಲು ಅಧಿಕೃತವಾಗಿ ಒಪ್ಪಿಗೆ ನೀಡಿತ್ತು.

ಈ ರಸ್ತೆಯ ನಾಮಫಲಕದ ಅನಾವರಣವನ್ನು ಕುಂಬಳೆ ಪಂಚಾಯತ್ ಅಧ್ಯಕ್ಷ ಶ್ರೀ ಪುಂಡರೀಕಾಕ್ಷ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಇನ್ನಿತರ ಪಂಚಾಯತ್ ಸದಸ್ಯರು, ಪಟ್ಲ ಸತೀಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಘವೇಂದ್ರ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.

