‘ಒಡಲಿನ ಮಡಿಲು-ಯಕ್ಷತಾರೆ’ ಇದು ಬಡಗು ತಿಟ್ಟಿನ ಶ್ರೇಷ್ಠ ಕಲಾವಿದ, ಪ್ರಸಂಗಕರ್ತ, ಗುರುವಾಗಿ ಮೆರೆದ ಶ್ರೀ ಹೊಸ್ತೋಟ ಮಂಜುನಾಥ ಭಾಗವತರ ಬದುಕಿನ ಕುರಿತಾಗಿ ತಿಳಿಸುವ ಕೃತಿಯು. ಶ್ರೀಯುತರ ಜೀವಿತಾವಧಿ 1940-2019.
ಈ ಕೃತಿಯ ಪ್ರಕಾಶಕರು ‘ಅನೇಕ’, ನಾರಾಯಣ ಜೋಶಿ ಚಾರಿಟೇಬಲ್ ಟ್ರಸ್ಟ್,ಬೆಂಗಳೂರು ಈ ಸಂಸ್ಥೆಯ ಪ್ರಕಾಶ್ ಎನ್. ಜೋಶಿ ಅವರು. ಪ್ರಧಾನ ಸಂಪಾದಕಿ ಮಮತಾ.ಜಿ ಅವರು. ಶ್ರೀಮತಿ ವಿಜಯಾ ನಳಿನಿ ರಮೇಶ್ ಶಿರಸಿ, ಶ್ರೀ ಜಿ.ಎಲ್.ಹೆಗಡೆ ಕುಮಟಾ, ಶ್ರೀ ಶಂಕರ ಶಾಸ್ತ್ರಿ ಕೋಟೆಗುಡ್ಡ ಇವರನ್ನೊಳಗೊಂಡ ಸಂಪಾದಕ ಮಂಡಳಿಯ ಪರಿಶ್ರಮದಲ್ಲಿ ಈ ಪುಸ್ತಕವು 2015ರಲ್ಲಿ ಪ್ರಕಟವಾಗಿತ್ತು.
ಈ ಕೃತಿಯನ್ನು ಯಕ್ಷಗಾನದ ಮೇರು ಕಲಾವಿದ ಶ್ರೀ ಕೆ.ಶಿವರಾಮ ಹೆಗಡೆಯವರ ದಿವ್ಯ ಸ್ಮರಣೆಗೆ ಸಮರ್ಪಿಸಲಾಗಿದೆ. ಇದು ಒಟ್ಟು ನೂರಾ ಎಪ್ಪತ್ತಾರು ಪುಟಗಳನ್ನು ಹೊಂದಿದೆ. ಶ್ರೀ ಹೊಸ್ತೋಟ ಮಂಜುನಾಥ ಭಾಗವತರು ತಮ್ಮ ಅನಿಸಿಕೆಗಳನ್ನು ‘ಅರಿಕೆ’ ಎಂಬ ಬರಹದಲ್ಲಿ ತಿಳಿಸಿರುತ್ತಾರೆ. ಪ್ರಧಾನ ಸಂಪಾದಕಿ ಮಮತಾ.ಜಿ ಅವರು ‘ಅಕ್ಷರ ಕಿರೀಟ’ ಎಂಬ ಶೀರ್ಷಿಕೆಯಡಿ ಲೇಖನವನ್ನು ಬರೆದಿರುತ್ತಾರೆ.
ಇದು ಭಾಗವತರ ಸಮಗ್ರ ಜೀವನಾನುಭವವನ್ನು ಕಟ್ಟಿಕೊಡುವ ಕೃತಿಯಲ್ಲ. ಬದಲಿಗೆ ಅವರ ಕೆಲವು ವಿಚಾರ, ಅನುಭವ, ಅನಿಸಿಕೆಗಳನ್ನು ಪರಿಚಯಿಸುವ ಕೃತಿ ಎಂಬ ವಿಚಾರವನ್ನು ತಮ್ಮ ಬರಹದಲ್ಲಿ ಮಮತಾ.ಜಿ ಅವರು ತಿಳಿಸಿರುತ್ತಾರೆ. ಈ ಕೃತಿಯಲ್ಲಿ ಹೊಸ್ತೋಟ ಮಂಜುನಾಥ ಭಾಗವತರು ತಮ್ಮ ಕಲಾಬದುಕಿನ ಬಹಳಷ್ಟು ವಿಚಾರಗಳನ್ನು ತಿಳಿಸಿರುತ್ತಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಈ ಕೃತಿಯು ಪ್ರಕಟಗೊಳ್ಳಲು ಕಾರಣರಾದ ಪ್ರಕಾಶಕರಿಗೆ, ಸಂಪಾದಕರಿಗೆ, ಸಂಪಾದಕ ಮಂಡಳಿಗೆ ಅಭಿನಂದನೆಗಳು. ಸಾಹಿತ್ಯ ಸೇವೆಯು ನಿರಂತರವಾಗಿ ನಡೆಯುತ್ತಿರಲಿ ಎಂಬ ಆಶಯಗಳು.
ಪುಸ್ತಕ ಪರಿಚಯ: ರವಿಶಂಕರ್ ವಳಕ್ಕುಂಜ