ಕಡಬ ನಾರಾಯಣ ಆಚಾರ್ಯರದು ತೆಂಕುತಿಟ್ಟಿನ ಹಿಮ್ಮೇಳದ ಒಂದು ಪ್ರಖ್ಯಾತ ಹೆಸರು. ಸುಮಾರು 30ಕ್ಕೂ ಹೆಚ್ಚು ವರ್ಷಗಳ ಕಾಲ ಖ್ಯಾತ ಮದ್ದಳೆಗಾರರಾಗಿ ಯಕ್ಷಗಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸಿದವರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಅವರು ಅಸ್ತಂಗತರಾದ ನಂತರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಿದವರು ಅವರ ಸುಪುತ್ರರಾದ ಕಡಬ ವಿನಯ ಆಚಾರ್ಯ. ಆದರೆ ವಿಧಿಲಿಖಿತವನ್ನು ತಪ್ಪಿಸುವವರಾರು? ಕಡಬ ವಿನಯ ಆಚಾರ್ಯರೂ ಯಕ್ಷರಂಗದ ಮದ್ದಳೆಗಾರರಾಗಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ತಮ್ಮ ಪ್ರಸಿದ್ಧಿಯ ಉತ್ತುಂಗದಲ್ಲಿರುವಾಗಲೇ ಸಣ್ಣ ವಯಸ್ಸಿನಲ್ಲಿಯೇ ಈ ಲೋಕದ ಯಾತ್ರೆಯನ್ನು ಮುಗಿಸಿದರು.

ಡಬ ನಾರಾಯಣ ಆಚಾರ್ಯ ಮತ್ತು ಕಡಬ ವಿನಯ ಆಚಾರ್ಯರು ಯಕ್ಷಗಾನಕ್ಕೆ ಸಲ್ಲಿಸಿದ ಅಪೂರ್ವ ಸೇವೆಯನ್ನು ಮತ್ತು ಗಳಿಸಿದ ಕೀರ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಇವರಿಬ್ಬರ ಸ್ಮರಣಾರ್ಥ ಪ್ರತಿ ವರ್ಷವೂ ಯಕ್ಷಗಾನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಯನ್ನು ಮಾಡಿದ ಕಲಾವಿದರನ್ನು ಗುರುತಿಸಿ ಅವರನ್ನು ಪ್ರಶಸ್ತಿಯ ಮೂಲಕ ಗೌರವಿಸಲಾಗುವುದೆಂದು ಕಡಬ ಸಂಸ್ಮರಣಾ ಸಮಿತಿಯು ತಿಳಿಸಿದೆ.

ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ನೀಡಿ ಗೌರವಿಸಲಾಗುವುದು. ಕಡಬ ಸಂಸ್ಮರಣಾ ಸಮಿತಿಯ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 06.12.2020ರ ಆದಿತ್ಯವಾರ ಅಪರಾಹ್ನ ಸಮಯ 2.30ರಿಂದ ಸಂಜೆ ಘಂಟೆ 5.30ರ ವರೆಗೆ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ಕಾರ್ಯಕ್ರಮ ಅಂತರ್ಜಾಲದ ಯೂಟ್ಯೂಬ್ ಚಾನೆಲ್ ಗಳಲ್ಲಿ ನೇರ ಪ್ರಸಾರಕ್ಕೆ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

