Thursday, May 14, 2026
Homeಯಕ್ಷಗಾನಎಂ. ಆರ್. ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ - ಯಕ್ಷಗಾನ ಕಲಾರಂಗದಿಂದ

ಎಂ. ಆರ್. ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ – ಯಕ್ಷಗಾನ ಕಲಾರಂಗದಿಂದ

ನವೆಂಬರ್ 7, 2020 ರಂದು ನಮ್ಮನ್ನಗಲಿದ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ ಮಲ್ಪೆ ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ ಸಭೆ ಉಡುಪಿಯ ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ನಡೆಯಿತು.

ಸಾಮಗರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸರಳ ಉದಾರ ವ್ಯಕ್ತಿತ್ವ ಮತ್ತು ಕಲಾ ಶ್ರೀಮಂತಿಕೆಯ ಕುರಿತು ಎಸ್. ವಿ. ಭಟ್, ಪಿ.ಕಿಶನ್ ಹೆಗ್ಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ವಾಸುದೇವ ರಂಗಾ ಭಟ್, ನಾರಾಯಣ ಎಂ. ಹೆಗಡೆ ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ: ಚೌಕಿಗೆ ಬಂದವಳು ರಂಗಸ್ಥಳದಲ್ಲೂ ಕಾಡಿದಳು…

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಸ್ತಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯೊಂದಿಗೆ ಅವರಿಗಿದ್ದ ಗಾಢ ಸಂಬಂಧವನ್ನು ನೆನಪಿಸಿಕೊಂಡರು ಕಾರ್ಯಕ್ರಮ ನಿರೂಪಿಸಿದರು

ಇದನ್ನೂ ಓದಿ: ಮತ್ತೆ ಮರುಕಳಿಸೀತೇ ಮೂರಾಟದ ವೈಭವಗಳು? 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments