ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
