ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
