ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಕಳೆದ ಎಂಟು ವರ್ಷಗಳಿಂದ ಆಯೋಜಿಸುತ್ತಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ವನ್ನು ಕೋವಿಡ್ – 19 ಹಿನ್ನೆಲೆಯಲ್ಲಿ ರದ್ದುಪಡಿಸಿದ್ದು, ಈ ಬಾರಿ ಸರಕಾರದ ನಿಯಮಾವಳಿಗೊಳಪಟ್ಟು ಒಂದು ದಿನದ ‘ಯಕ್ಷಗಾನ ತಾಳಮದ್ದಳೆ ಪರ್ವ’ವನ್ನು ನಡೆಸಲು ತೀರ್ಮಾನಿಸಲಾಗಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಇದೇ 2020 ನವೆಂಬರ್ 29 ರಂದು ಆದಿತ್ಯವಾರ ಅಪರಾಹ್ನ ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ‘ಪಾರಿಜಾತ’ ಸಭಾಂಗಣದಲ್ಲಿ ‘ರಾಜ್ಯೋತ್ಸವ ಕಲಾ ಸಂಭ್ರಮ – 2020’ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರ ಸಂಸ್ಮರಣೆ, ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಮತ್ತು ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
ಈ ಸಂದರ್ಭದಲ್ಲಿ ಕನ್ನಡ ನುಡಿ ಹಬ್ಬವಾಗಿ ನಡೆಯುವ ಯಕ್ಷಗಾನ ತಾಳಮದ್ದಳೆ ಪರ್ವದಲ್ಲಿ ಜಿಲ್ಲೆಯ ಹೆಸರಾಂತ ಕಲಾವಿದರಿಂದ ‘ಶ್ರೀಕೃಷ್ಣ ತಂತ್ರ – ಮಾರುತಿ ಪ್ರತಾಪ’ ತಾಳಮದ್ದಳೆ ಕೂಟವನ್ನು ಏರ್ಪಡಿಸಲಾಗಿದೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
