ಕೋವಿಡ್- 19 ಲಸಿಕೆಯ ಆಗಮನವು ಕೇವಲ ವಿಜ್ಞಾನಿಗಳ ಕೈಯಲ್ಲಿದೆ ಎಂದು ಪಿಎಂ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಮತ್ತು ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದ ರಾಜಕೀಯ ನೇತಾರರಿಗೆ ಪರೋಕ್ಷವಾಗಿ ಮಾತಿನಲ್ಲಿಯೇ ಎದಿರೇಟು ನೀಡಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ವಿಡಿಯೋಕಾನ್ಫರೆನ್ಸಿಂಗ್ ಮೂಲಕ ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಕೆಲವು ರಾಜಕಾರಣಿಗಳು ಕೋವಿಡ್-19 ಲಸಿಕೆ ಮತ್ತು ಅದರ ವಿತರಣೆಯ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ಆದರೆ ಅಂತಹವರ ಈ ರೀತಿಯ ವರ್ತನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದೂ ಶ್ರೀ ನರೇಂದ್ರ ಮೋದಿಯವರು ಈ ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
