ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ನೀಡುವ ಕಾಳಿಂಗ ನಾವಡ ಪ್ರಶಸ್ತಿ 2020ರ ಕಾರ್ಯಕ್ರಮವು ಕಾಳಿಂಗ ನಾವಡರ ಮೂಲ ಮನೆಯಾದ ಗುಂಡ್ಮಿಯ ಭಾಗವತರ ಮನೆಯಲ್ಲಿ ಈ ದಿನ ಸಂಜೆ ಯಶಸ್ವಿಯಾಗಿ ನಡೆಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಯಕ್ಷಗಾನದ ಹಿರಿಯ ಕಲಾವಿದರಾದ ಹಂದಟ್ಟು ಗೋವಿಂದ ಉರಾಳರು ಈ ಒಂದು ಪ್ರಶಸ್ತಿಗೆ ಭಾಜನರಾದರು. ಈ ಒಂದು ಸಮಾರಂಭದಲ್ಲಿ ಹಿರಿಯ ಪುರೋಹಿತರಾದ ಶ್ರೀ ವೆಂಕಪ್ಪಯ್ಯ ಭಟ್ಟರು, ಕನ್ನಡ ಪ್ರಾಧ್ಯಾಪಕರಾದ ಡಾ.ಶ್ರೀಕಾಂತ್ ಸಿದ್ದಾಪುರ, ಯಕ್ಷಗಾನ ಭಾಗವತರಾದ ಶ್ರೀ ಸುರೇಂದ್ರ ಫಣಿಯೂರ್, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್, ಕಾಳಿಂಗ ನಾವಡರ ಸಹೋದರ ಶ್ರೀ ಗಣಪಯ್ಯ ನಾವಡ, ಕಲಾಕದಂಬ ಆರ್ಟ್ ಸೆಂಟರ್ ನ ಅಂಬರೀಷ ಭಟ್ ಹಾಗೂ ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಭಾ ಕಾರ್ಯಕ್ರಮದ ನಂತರ ಲಂಬೋದರ ಹೆಗ್ಡೆ ಹಾಗೂ ಸುಜಯೀಂದ್ರ ಹಂದೆ ತಂಡದವರು ಯಕ್ಷ ಗಾನ ವೈಭವದ ಮೂಲಕ ಪ್ರೇಕ್ಷಕರ ಮನರಂಜಿಸಿದರು. ಈ ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ ಹಾಗೂ ವಿಶ್ವನಾಥ ಉರಾಳರು ಯಶಸ್ವಿಯಾಗಿ ನಿರ್ವಹಿಸಿದರು.
