ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ನೀಡುವ ಕಾಳಿಂಗ ನಾವಡ ಪ್ರಶಸ್ತಿ 2020ರ ಕಾರ್ಯಕ್ರಮವು ಕಾಳಿಂಗ ನಾವಡರ ಮೂಲ ಮನೆಯಾದ ಗುಂಡ್ಮಿಯ ಭಾಗವತರ ಮನೆಯಲ್ಲಿ ಈ ದಿನ ಸಂಜೆ ಯಶಸ್ವಿಯಾಗಿ ನಡೆಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಯಕ್ಷಗಾನದ ಹಿರಿಯ ಕಲಾವಿದರಾದ ಹಂದಟ್ಟು ಗೋವಿಂದ ಉರಾಳರು ಈ ಒಂದು ಪ್ರಶಸ್ತಿಗೆ ಭಾಜನರಾದರು. ಈ ಒಂದು ಸಮಾರಂಭದಲ್ಲಿ ಹಿರಿಯ ಪುರೋಹಿತರಾದ ಶ್ರೀ ವೆಂಕಪ್ಪಯ್ಯ ಭಟ್ಟರು, ಕನ್ನಡ ಪ್ರಾಧ್ಯಾಪಕರಾದ ಡಾ.ಶ್ರೀಕಾಂತ್ ಸಿದ್ದಾಪುರ, ಯಕ್ಷಗಾನ ಭಾಗವತರಾದ ಶ್ರೀ ಸುರೇಂದ್ರ ಫಣಿಯೂರ್, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ ಹೆಬ್ಬಾರ್, ಕಾಳಿಂಗ ನಾವಡರ ಸಹೋದರ ಶ್ರೀ ಗಣಪಯ್ಯ ನಾವಡ, ಕಲಾಕದಂಬ ಆರ್ಟ್ ಸೆಂಟರ್ ನ ಅಂಬರೀಷ ಭಟ್ ಹಾಗೂ ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸಭಾ ಕಾರ್ಯಕ್ರಮದ ನಂತರ ಲಂಬೋದರ ಹೆಗ್ಡೆ ಹಾಗೂ ಸುಜಯೀಂದ್ರ ಹಂದೆ ತಂಡದವರು ಯಕ್ಷ ಗಾನ ವೈಭವದ ಮೂಲಕ ಪ್ರೇಕ್ಷಕರ ಮನರಂಜಿಸಿದರು. ಈ ಸಂಪೂರ್ಣ ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ ಹಾಗೂ ವಿಶ್ವನಾಥ ಉರಾಳರು ಯಶಸ್ವಿಯಾಗಿ ನಿರ್ವಹಿಸಿದರು.
