ಯಕ್ಷ ಶಾಲ್ಮಲಾ (ರಿ) ಆಯೋಜಿಸುವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದ ಏಳು ದಿನಗಳ ತಾಳಮದ್ದಳೆ ಕಾರ್ಯಕ್ರಮವಾದ “ಶ್ರೀ ರಾಮಾನುಭವ” ಎಂಬ ಸರಣಿ ತಾಳಮದ್ದಳೆ ಸಪ್ತಾಹ ಮುಂಡಿಗೇಸರ ಎಂಬಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಈ ತಾಳಮದ್ದಳೆ ಸಪ್ತಾಹದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ ಎರಡನ್ನೂ ಮಾಡಲಾಗುತ್ತಿದೆ. ದಿನಾಂಕ ಡಿಸೆಂಬರ್ 6ರಿಂದ ಡಿಸೆಂಬರ್ 12ರ ವರೆಗೆ ಈ ಕಾರ್ಯಕ್ರಮವು ಪ್ರತಿದಿನ ಸಂಜೆ 4-30ರಿಂದ ನಡೆಯಲಿದೆ. ಕಾರ್ಯಕ್ರಮವು ಸರಕಾರದ ಕೋವಿಡ್19ರ ನೀತಿ ನಿಯಮಾವಳಿಗಳನ್ನನುಸರಿಸಿ ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಏಳೂ ದಿನಗಳ ತಾಳಮದ್ದಳೆ ಪ್ರಸಂಗಗಳಲ್ಲಿ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈಯವರು ಪ್ರತಿದಿನವೂ ಶ್ರೀರಾಮನ ಪಾತ್ರವನ್ನು ವಹಿಸುತ್ತಿರುವುದು ಈ ಸಪ್ತಾಹದ ವಿಶೇಷತೆಯಾಗಿದೆ.
