ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ನೀಡಿ ಗೌರವಿಸಲಾಗಿದೆ. ಕಡಬ ಸಂಸ್ಮರಣಾ ಸಮಿತಿಯ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ ದಿನಾಂಕ 06.12.2020ರ ಆದಿತ್ಯವಾರ ನಡೆಯಿತು.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಕಡಬ ನಾರಾಯಣ ಆಚಾರ್ಯರದು ತೆಂಕುತಿಟ್ಟಿನ ಹಿಮ್ಮೇಳದ ಒಂದು ಪ್ರಖ್ಯಾತ ಹೆಸರು. ಸುಮಾರು 30ಕ್ಕೂ ಹೆಚ್ಚು ವರ್ಷಗಳ ಕಾಲ ಖ್ಯಾತ ಮದ್ದಳೆಗಾರರಾಗಿ ಯಕ್ಷಗಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸಿದವರು. ಅವರು ಅಸ್ತಂಗತರಾದ ನಂತರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಿದವರು ಅವರ ಸುಪುತ್ರರಾದ ಕಡಬ ವಿನಯ ಆಚಾರ್ಯ.

ಆದರೆ ವಿಧಿಲಿಖಿತವನ್ನು ತಪ್ಪಿಸುವವರಾರು? ಕಡಬ ವಿನಯ ಆಚಾರ್ಯರೂ ಯಕ್ಷರಂಗದ ಮದ್ದಳೆಗಾರರಾಗಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ತಮ್ಮ ಪ್ರಸಿದ್ಧಿಯ ಉತ್ತುಂಗದಲ್ಲಿರುವಾಗಲೇ ಸಣ್ಣ ವಯಸ್ಸಿನಲ್ಲಿಯೇ ಈ ಲೋಕದ ಯಾತ್ರೆಯನ್ನು ಮುಗಿಸಿದರು.

ಇವರೀರ್ವರ ಹೆಸರಿನಲ್ಲಿ ನೀಡಲಾಗುವ ಕಡಬ ಸಂಸ್ಮರಣಾ ಪ್ರಶಸ್ತಿಯು ಹಿರಿಯ ಖ್ಯಾತ ಮದ್ದಳೆಗಾರರಾದ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ಅರ್ಹವಾಗಿಯೇ ಸಂದಿದೆ.
