ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ನೀಡಿ ಗೌರವಿಸಲಾಗಿದೆ. ಕಡಬ ಸಂಸ್ಮರಣಾ ಸಮಿತಿಯ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ ದಿನಾಂಕ 06.12.2020ರ ಆದಿತ್ಯವಾರ ನಡೆಯಿತು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ
ಕಡಬ ನಾರಾಯಣ ಆಚಾರ್ಯರದು ತೆಂಕುತಿಟ್ಟಿನ ಹಿಮ್ಮೇಳದ ಒಂದು ಪ್ರಖ್ಯಾತ ಹೆಸರು. ಸುಮಾರು 30ಕ್ಕೂ ಹೆಚ್ಚು ವರ್ಷಗಳ ಕಾಲ ಖ್ಯಾತ ಮದ್ದಳೆಗಾರರಾಗಿ ಯಕ್ಷಗಾನ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಸಲ್ಲಿಸಿದವರು. ಅವರು ಅಸ್ತಂಗತರಾದ ನಂತರ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಿದವರು ಅವರ ಸುಪುತ್ರರಾದ ಕಡಬ ವಿನಯ ಆಚಾರ್ಯ.
ಆದರೆ ವಿಧಿಲಿಖಿತವನ್ನು ತಪ್ಪಿಸುವವರಾರು? ಕಡಬ ವಿನಯ ಆಚಾರ್ಯರೂ ಯಕ್ಷರಂಗದ ಮದ್ದಳೆಗಾರರಾಗಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿ ತಮ್ಮ ಪ್ರಸಿದ್ಧಿಯ ಉತ್ತುಂಗದಲ್ಲಿರುವಾಗಲೇ ಸಣ್ಣ ವಯಸ್ಸಿನಲ್ಲಿಯೇ ಈ ಲೋಕದ ಯಾತ್ರೆಯನ್ನು ಮುಗಿಸಿದರು.
ಇವರೀರ್ವರ ಹೆಸರಿನಲ್ಲಿ ನೀಡಲಾಗುವ ಕಡಬ ಸಂಸ್ಮರಣಾ ಪ್ರಶಸ್ತಿಯು ಹಿರಿಯ ಖ್ಯಾತ ಮದ್ದಳೆಗಾರರಾದ ಶ್ರೀ ಹರಿನಾರಾಯಣ ಬೈಪಾಡಿತ್ತಾಯ ಅವರಿಗೆ ಅರ್ಹವಾಗಿಯೇ ಸಂದಿದೆ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ