ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ದಿ-10/12/2020 ಗುರುವಾರದಂದು ನಾಟ್ಯ ಸಂಪದ (ರಿ.) ಸಂಸ್ಥೆಯ ಯಕ್ಷಗಾನ ತರಗತಿಗಳು ಪದ್ಮನಾಭ ನಗರದ ಶ್ರೀ ಪ್ರಸನ್ನಗಣಪತಿ ದೇವಾಲಯದಲ್ಲಿ ಉದ್ಘಾಟಿತಗೊಂಡವು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಗುರುಗಳಾದ ಶ್ರೀ ರವೀಶ ಹೆಗಡೆ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯರಾದ ಶ್ರೀ ಶ್ರೀನಿವಾಸ ಸಾಸ್ತಾನ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ಜೀವನದ ಉನ್ನತಿಗೆ ಕಲೆಯೆ ಆಧಾರ, ಹಾಗಾಗಿ ಯಾವುದಾದರು ಕಲೆಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕೆಂದು ನುಡಿದರು.
ಸೃಷ್ಠಿ ಕಲಾವಿದ್ಯಾಲಯದ ಅಧ್ಯಕ್ಷರಾದ ಶ್ರೀ ಛಾಯಾಪತಿ ಕಂಚೀಬೈಲ್ ಇವರು ಕಲಾಪೋಷಣೆ ನಮ್ಮ ನಿತ್ಯದ ಕಾಯಕವಾಗಬೇಕು, ಆಗ ಕಲೆಯೆ ನಮ್ಮನ್ನು ಪೋಷಿಸುತ್ತದೆ ಎಂಬ ಅಧ್ಯಕ್ಷ ನುಡಿಗಳೊಂದಿಗೆ ಹಾರೈಸಿದರು.
ಪೋಷಕರು ಮಕ್ಕಳ ಮಾನಸಿಕ ಹಾಗೂ ದೈಹಿಕ ದೃಢತೆಗೆ ಯಕ್ಷಗಾನ ಸಹಾಯಕಾರಿ ಎಂಬ ಮಾತುಗಳನ್ನಾಡಿದರು. ಶ್ರೀ ಕೃಷ್ಣಪ್ರಸಾದ್ ವಂದಿಸಿದರು. ಕುಮಾರಿ ಅನುಶ್ರೀ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಹೆಜ್ಜೆಯ ಆರಂಭದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ