ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ದಿ-10/12/2020 ಗುರುವಾರದಂದು ನಾಟ್ಯ ಸಂಪದ (ರಿ.) ಸಂಸ್ಥೆಯ ಯಕ್ಷಗಾನ ತರಗತಿಗಳು ಪದ್ಮನಾಭ ನಗರದ ಶ್ರೀ ಪ್ರಸನ್ನಗಣಪತಿ ದೇವಾಲಯದಲ್ಲಿ ಉದ್ಘಾಟಿತಗೊಂಡವು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಗುರುಗಳಾದ ಶ್ರೀ ರವೀಶ ಹೆಗಡೆ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯರಾದ ಶ್ರೀ ಶ್ರೀನಿವಾಸ ಸಾಸ್ತಾನ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ಜೀವನದ ಉನ್ನತಿಗೆ ಕಲೆಯೆ ಆಧಾರ, ಹಾಗಾಗಿ ಯಾವುದಾದರು ಕಲೆಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕೆಂದು ನುಡಿದರು.

ಸೃಷ್ಠಿ ಕಲಾವಿದ್ಯಾಲಯದ ಅಧ್ಯಕ್ಷರಾದ ಶ್ರೀ ಛಾಯಾಪತಿ ಕಂಚೀಬೈಲ್ ಇವರು ಕಲಾಪೋಷಣೆ ನಮ್ಮ ನಿತ್ಯದ ಕಾಯಕವಾಗಬೇಕು, ಆಗ ಕಲೆಯೆ ನಮ್ಮನ್ನು ಪೋಷಿಸುತ್ತದೆ ಎಂಬ ಅಧ್ಯಕ್ಷ ನುಡಿಗಳೊಂದಿಗೆ ಹಾರೈಸಿದರು.

ಪೋಷಕರು ಮಕ್ಕಳ ಮಾನಸಿಕ ಹಾಗೂ ದೈಹಿಕ ದೃಢತೆಗೆ ಯಕ್ಷಗಾನ ಸಹಾಯಕಾರಿ ಎಂಬ ಮಾತುಗಳನ್ನಾಡಿದರು. ಶ್ರೀ ಕೃಷ್ಣಪ್ರಸಾದ್ ವಂದಿಸಿದರು. ಕುಮಾರಿ ಅನುಶ್ರೀ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಹೆಜ್ಜೆಯ ಆರಂಭದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

