ಕರ್ನಾಟಕ ಯಕ್ಷಗಾನ ಅಕಾಡೆಮಿಯು ಮಿತ್ರ ಸಂಗಮ (ರಿ), ಬೀಜಾಡಿ, ಗೋಪಾಡಿ ಇದರ ಸಹಯೋಗದೊಂದಿಗೆ ವಿಶಿಷ್ಟವಾದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಬಡಗು ತಿಟ್ಟು ಯಕ್ಷಗಾನ ಪರಂಪರೆಯ ಹಾರಾಡಿ ತಿಟ್ಟು ಮತ್ತು ಮಟಪಾಡಿ ತಿಟ್ಟುಗಳ ದಾಖಲೀಕರಣ ಪ್ರಕ್ರಿಯೆಯನ್ನು ಮೇಲಿನ ಎರಡೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
ಈ ಕಾರ್ಯಕ್ರಮ ೨೦. ೧೨. ೨೦೨೦ ರ ಆದಿತ್ಯವಾರದಂದು ಮದ್ಯಾಹ್ನ ಘಂಟೆ ೨. ೩೦ ರಿಂದ ಆರಂಭವಾಗಲಿದ್ದು ಉದ್ಘಾಟನಾ ಸಮಾರಂಭ, ಸಭಾ ಕಾರ್ಯಕ್ರಮಗಳ ನಂತರ ವಿಷಯ ಮಂಡನೆ, ಉಭಯ ತಿಟ್ಟುಗಳ ಪ್ರಾತ್ಯಕ್ಷಿಕೆ ನಡೆಯಲಿದ್ದು ಕೊನೆಯಲ್ಲಿ ಬಡಗು ತಿಟ್ಟಿನ ಖ್ಯಾತ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಈ ಕಾರ್ಯಕ್ರಮವು ಕುಂದಾಪುರದ ವಡೇರ ಹೋಬಳಿಯಲ್ಲಿರುವ ಶ್ರೀ ವ್ಯಾಸರಾಜ ಮಠದಲ್ಲಿ ನಡೆಯಲಿದೆ. ಕಲಾಸಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.