Tuesday, July 9, 2024
Homeಯಕ್ಷಗಾನಪ್ರೊ. ಕೆ. ಸದಾಶಿವ ರಾವ್‍ ಅವರಿಗೆ ‘ಯಕ್ಷಚೇತನ’ ಪ್ರಶಸ್ತಿ

ಪ್ರೊ. ಕೆ. ಸದಾಶಿವ ರಾವ್‍ ಅವರಿಗೆ ‘ಯಕ್ಷಚೇತನ’ ಪ್ರಶಸ್ತಿ

ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯ ಹಿರಿಯ ಕಾರ್ಯಕರ್ತರಿಗೆ ನೀಡುವ ಯಕ್ಷಚೇತನ ಪ್ರಶಸ್ತಿಗೆ ವಿದ್ಯಾಪೋಷಕ್‍ ಕೋಶಾಧಿಕಾರಿ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಸದಾಶಿವ ರಾವ್‍ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 26, ಶನಿವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಮತ್ತು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments