ಸಂಸ್ಥೆಯು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ನೀಡುವ 17 ಪ್ರಶಸ್ತಿಗಳಿಗೆ ತೆಂಕು ಬಡಗಿನ ಈ ಕೆಳಗಿನ ಹಿರಿಯ ಕಲಾವಿದರು ಆಯ್ಕೆಯಾಗಿದ್ದಾರೆ.



ಅನಂತ ಕುಲಾಲ ಕಕ್ಕುಂಜೆ,ಮಹಾಬಲ ನಾೈಕ್ ಬುಕ್ಕಿಗುಡ್ಡೆ, ರಾಮಕೃಷ್ಣ ಶೆಟ್ಟಿಗಾರ್ ಮಿಜಾರು, ಬಾಬು ಕುಲಾಲ ಹಳ್ಳಾಡಿ, ನಗ್ರಿ ಮಹಾಬಲ ರೈ, ಪ್ರಭಾಕರ ಹೆಗಡೆ ಚಿಟ್ಟಾಣಿ ಹೊನ್ನಾವರ, ರಾಮಕೃಷ್ಣ ಮಂದಾರ್ತಿ, ಮಂಜುನಾಥ ಭಟ್ ಬೆಳ್ಳಾರೆ, ತಿಮ್ಮಪ್ಪ ಹೆಗಡೆ ಶಿರಳಗಿ ಸಿದ್ದಾಪುರ, ಬಸವರಾಜ್ ಹುಣ್ಸೆಮಕ್ಕಿ, ರಾಮಚಂದ್ರ ಹೆಗಡೆ ಮೂರೂರು, ರಘುರಾಮ ಗೌಡ ಕೇಂಜ, ದಿನೇಶ ಅಮ್ಮಣ್ಣಾಯ ಅರಸಿನಮಕ್ಕಿ, ಉಮೇಶ ಹೆಬ್ಬಾರ್ ನಿಡ್ಲೆ, ಸಂಜಯಕುಮಾರ್ ಶೆಟ್ಟಿ ಗೋಣಿಬೀಡು, ಮಹಾದೇವ ಪಟಗಾರ ಕುಮಟಾ, ರಾಘವದಾಸ್ ಮುಡಿಪು.

















ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 26, ಶನಿವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ


ಮತ್ತು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು 20,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH