ಮಂದಾರ್ತಿ 3 ನೇ ಮೇಳದ ಒತ್ತು ಎರಡನೇ ವೇಷಧಾರಿ ಸಿ. ಸಾಧುಕೊಠಾರಿ (58 ವರ್ಷ) ಇಂದು (05-01-2021) ಮುಂಜಾನೆ 5 ಗಂಟೆಗೆ ದೈವಾಧೀನರಾದರು. ಸಾೈಬರಕಟ್ಟೆ ಬಳಿ ಕಾಜ್ರಳ್ಳಿಯಲ್ಲಿ ಜರಗಿದ ಮಧುರಾ ಮಹೀಂದ್ರ ಪ್ರಸಂಗದಲ್ಲಿ ಮಾಗಧನ ಪಾತ್ರವನ್ನು ಸೊಗಸಾಗಿ ನಿರ್ವಹಿಸಿ ಚೌಕಿಮನೆಯಲ್ಲಿ ಸ್ವಲ್ಪ ವಿಶ್ರಾಂತಿ ಪಡೆದ ಬಳಿಕ ಎದೆನೋವು ಬಂದುದರಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಹ ಕಲಾವಿದರು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಹೃದಯ ಸ್ಥಂಭನಕ್ಕೊಳಗಾಗಿ ಕಲಾಭಿಮಾನಿಗಳನ್ನು ಶೋಕ ಸಾಗರಕ್ಕೊಳಗು ಮಾಡಿದರು. 15ನೇ ವರ್ಷಕ್ಕೆ ಮೇಳ ಸೇರಿದ ಇವರು ಗೋಳಿಗರಡಿ, ಕಮಲಶಿಲೆ, ಅಮೃತೇಶ್ವರೀ, ಸಾಲಿಗ್ರಾಮ, ಸೌಕೂರು, ಹಾಲಾಡಿ ಮತ್ತು ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ವೈವಿಧ್ಯಮಯ ವೇಷಗಳನ್ನು ಮಾಡಿ ಕಲಾ ಸೇವೆ ಗೈದಿರುತ್ತಾರೆ.ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿಯನ್ನುಅಗಲಿದ್ದು, ಅಂತ್ಯಕ್ರಿಯೆಯನ್ನುಇಂದು ಸಂಜೆ ಬಾರ್ಕೂರಿನ ಬಳಿ ಹೇರಾಡಿಯಲ್ಲಿ ನೆರೆವೇರಿಸಲಾಗುವುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಯಕ್ಷಗಾನ ಕಲಾರಂಗದಲ್ಲಿ ರೂ1 ಲಕ್ಷ ಜೀವನ ಆನಂದ ವಿಮಾ ಯೋಜನೆಯನ್ನು ಮಾಡಿಕೊಂಡಿದ್ದು, ಯಕ್ಷನಿಧಿಯ ಎಲ್ಲಾ ಯೋಜನೆಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡ ಸರಳ ಸಜ್ಜನಿಕೆಯ ಕಲಾವಿದರಾಗಿದ್ದ ಇವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

