63 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ನಿರ್ಮಿಸುತ್ತಿರುವ ನೂತನ ರಂಗಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೆಂದ್ರ ಹೆಗ್ಗೆಡೆಯವರು ಪ್ರಸಾದ ರೂಪವಾಗಿ 5 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿ ಹರಸಿದ್ದಾರೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕರಾದ ಶ್ರೀ ಬಿ. ಗಣೇಶ್ರವರು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್ ಅವರಿಗೆ ಡಿ.ಡಿ.ಯನ್ನು ದಿನಾಂಕ 06-01-2021ರಂದು ಹಸ್ತಾಂತರಿಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಈ ಸಮಯದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ಅಂಬಲಪಾಡಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಆಚಾರ್, ಮೇಲ್ವಿಚಾರಕರಾದ ಜಯಕರ್, ಸಹಾಯಕಿ ಗೀತಾ ಪಾಲನ್, ಪಂಚಾಯತ್ ಸದಸ್ಯರಾದ ಹರೀಶ ಪಾಲನ್, ಯುವಕ ಮಂಡಲದ ಗೌರವ ಅಧ್ಯಕ್ಷ ಕೀರ್ತಿ ಶೆಟ್ಟಿ, ಅಂಬಲಪಾಡಿ ಲಕ್ಷ್ಮೀಜನಾರ್ದನ ಯಕ್ಷಗಾನ ಮಂಡಳಿಯ ನಾರಾಯಣ ಎಮ್. ಹೆಗಡೆ, ಕೆ. ಜೆ. ಗಣೇಶ, ಕೆ. ಅಜಿತ್ಕುಮಾರ್, ನಟರಾಜ ಉಪಾಧ್ಯ, ಪ್ರವೀಣ ಉಪಾಧ್ಯ, ಜಯ ಕೆ., ಪ್ರಣಿತ್ ಉಪಸ್ಥಿತರಿದ್ದರು. ಮಂಡಳಿ ಅಧ್ಯಕ್ಷ ಮುರಲಿ ಕಡೆಕಾರ್ ಸ್ವಾಗತಿಸಿ, ಕಾರ್ಯದರ್ಶಿ ಕೆ.ಜೆ. ಕೃಷ್ಣ ಧನ್ಯವಾದ ಸಮರ್ಪಿಸಿದರು.
