ಕೋವಿಡ್ ನ ಉಪಟಳದಿಂದ ನಿಂತ ನೀರಾಗಿದ್ದ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕಲಾವಿದರ ಬದುಕು ಮತ್ತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವ ವಾತಾವರಣ ರೂಪುಗೊಳ್ಳುತ್ತಿರುವುದರ ಮೂಲಕ ನಿಧಾನವಾಗಿ ಚೇತರಿಕೊಳ್ಳುತ್ತಾ ಸಾಗಿದೆ. ಕಲಾಕದಂಬ ಆರ್ಟ್ ಸೆಂಟರ್ ನಿರಂತರ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಂಸ್ಥೆ. ಕೋವಿಡ್ ನ ಪ್ರಭಾವ ಕಡಿಮೆಯಾಗುತ್ತಿರುವ ಈ ಸಂಧರ್ಭದಲ್ಲಿ ಮತ್ತೆ ಸಾಂಸ್ಕೃತಿಕ ಲೋಕದತ್ತ ಪಯಣ ಬೆಳೆಸುತ್ತಿದೆ.
ಪ್ರಸಿದ್ದ ಯಕ್ಷಗಾನ, ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಡಾ. ರಾಧಾಕೃಷ್ಣ ಉರಾಳರ ನಿರ್ದೇಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಕೊಮ್ಮಘಟ್ಟದ ಓಂ ಯೋಗಧಾಮ ಟ್ರಸ್ಟ್ ನ ಸಹಯೋಗದೊಂದಿಗೆ ಸಮತ್ವಂ ಯೋಗ ಮತ್ತು ಕಲಾಶಾಲೆಯ ಸಭಾಂಗಣದಲ್ಲಿ ದಿನಾಂಕ 17-01-2021 ರ ಸಂಜೆ 5 ಘಂಟೆಗೆ ನಡೆಯಲಿರುವ ಸಂಕ್ರಾಂತಿ ಕಲೋತ್ಸವದಲ್ಲಿ ಕಲಾಕದಂಬ ಆರ್ಟ್ ಸೆಂಟರ್ ನ ಕಲಾ ವಿದ್ಯಾರ್ಥಿಗಳಿಂದ ದಕ್ಷ ಯಜ್ಞ ಎಂಬ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಲಿದೆ.

ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಮೋಹಳ್ಳಿಯ ಶ್ರೀ ಸಿದ್ಧಾ ಆರೂಢ ಮಿಷನ್ ಆಶ್ರಮದ ಡಾ.ಶ್ರೀ ಆರೂಢಭಾರತೀ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ನೀಲಮ್ಮ, ಕರಬ ಪ್ರತಿಷ್ಟಾನದ ದೇವರಾಜ ಕರಬ ಹಾಗೂ ಓಂ ಯೋಗಧಾಮ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ಪ್ರದೀಪ್ ಆಗಮಿಸಲಿದ್ದಾರೆ.
- 5th Standard, English LESSON 10 – MOVING PICTURES
- 7th English, Prose Unit 7 – A Tribute to Netaji
- 7th Social History, CHAPTER 21 – PROGRESS IN DIFFERENT FIELDS
- 7th Social History, CHAPTER 20 – KARNATAKA-ECONOMIC AND SOCIAL TRANSFORMATION
- 7th Standard English Unit 8 – The Town by the Sea
ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ, ನಿತ್ಯಾನಂದ ನಾಯಕ್ ಹಾಗೂ ವಿಶ್ವನಾಥ ಉರಾಳ ನಿಭಾಯಿಸಲಿದ್ದಾರೆ. ಸರಕಾರದ ಕೋವಿಡ್ ಕುರಿತಾಗಿನ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮಗಳನ್ನು ನಡೆಸಲಿದ್ದು ಸೀಮಿತ ಜನರಿಗೆ ಮಾತ್ರ ಪ್ರವೇಶವಿರುತ್ತದೆ.
ಈ ಒಂದು ಯಕ್ಷಗಾನ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9886066732, 9448510582