ಕೋವಿಡ್ ನ ಉಪಟಳದಿಂದ ನಿಂತ ನೀರಾಗಿದ್ದ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕಲಾವಿದರ ಬದುಕು ಮತ್ತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವ ವಾತಾವರಣ ರೂಪುಗೊಳ್ಳುತ್ತಿರುವುದರ ಮೂಲಕ ನಿಧಾನವಾಗಿ ಚೇತರಿಕೊಳ್ಳುತ್ತಾ ಸಾಗಿದೆ. ಕಲಾಕದಂಬ ಆರ್ಟ್ ಸೆಂಟರ್ ನಿರಂತರ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಂಸ್ಥೆ. ಕೋವಿಡ್ ನ ಪ್ರಭಾವ ಕಡಿಮೆಯಾಗುತ್ತಿರುವ ಈ ಸಂಧರ್ಭದಲ್ಲಿ ಮತ್ತೆ ಸಾಂಸ್ಕೃತಿಕ ಲೋಕದತ್ತ ಪಯಣ ಬೆಳೆಸುತ್ತಿದೆ.
ಪ್ರಸಿದ್ದ ಯಕ್ಷಗಾನ, ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಡಾ. ರಾಧಾಕೃಷ್ಣ ಉರಾಳರ ನಿರ್ದೇಶಕತ್ವದ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಕೊಮ್ಮಘಟ್ಟದ ಓಂ ಯೋಗಧಾಮ ಟ್ರಸ್ಟ್ ನ ಸಹಯೋಗದೊಂದಿಗೆ ಸಮತ್ವಂ ಯೋಗ ಮತ್ತು ಕಲಾಶಾಲೆಯ ಸಭಾಂಗಣದಲ್ಲಿ ದಿನಾಂಕ 17-01-2021 ರ ಸಂಜೆ 5 ಘಂಟೆಗೆ ನಡೆಯಲಿರುವ ಸಂಕ್ರಾಂತಿ ಕಲೋತ್ಸವದಲ್ಲಿ ಕಲಾಕದಂಬ ಆರ್ಟ್ ಸೆಂಟರ್ ನ ಕಲಾ ವಿದ್ಯಾರ್ಥಿಗಳಿಂದ ದಕ್ಷ ಯಜ್ಞ ಎಂಬ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಲಿದೆ.

ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಮೋಹಳ್ಳಿಯ ಶ್ರೀ ಸಿದ್ಧಾ ಆರೂಢ ಮಿಷನ್ ಆಶ್ರಮದ ಡಾ.ಶ್ರೀ ಆರೂಢಭಾರತೀ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ನೀಲಮ್ಮ, ಕರಬ ಪ್ರತಿಷ್ಟಾನದ ದೇವರಾಜ ಕರಬ ಹಾಗೂ ಓಂ ಯೋಗಧಾಮ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ಪ್ರದೀಪ್ ಆಗಮಿಸಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಕಾರ್ಯಕ್ರಮದ ನಿರ್ವಹಣೆಯನ್ನು ಮುರಳೀಧರ ನಾವಡ, ನಿತ್ಯಾನಂದ ನಾಯಕ್ ಹಾಗೂ ವಿಶ್ವನಾಥ ಉರಾಳ ನಿಭಾಯಿಸಲಿದ್ದಾರೆ. ಸರಕಾರದ ಕೋವಿಡ್ ಕುರಿತಾಗಿನ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮಗಳನ್ನು ನಡೆಸಲಿದ್ದು ಸೀಮಿತ ಜನರಿಗೆ ಮಾತ್ರ ಪ್ರವೇಶವಿರುತ್ತದೆ.
ಈ ಒಂದು ಯಕ್ಷಗಾನ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ- 9886066732, 9448510582

