ಬೆಂಗಳೂರಿನ ಹೆಸರಾಂತ ತಂಡವಾದ ಯಕ್ಷಕಲಾ ಅಕಾಡೆಮಿಯು ಇದೀಗ ಯಕ್ಷಗಾನ ಉತ್ಸವವನ್ನು ಹಮ್ಮಿಕೊಂಡಿದೆ. ಇದೇ ತಿಂಗಳ 15 ರ ಸಂಜೆ 6.30 ಕ್ಕೆ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ.
ಅಂದು ಮುಖ್ಯ ಅಭ್ಯಾಗತರಾಗಿ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ನಟ ಗೋಪಾಲಕೃಷ್ಣ ನಾಯರಿ ಹಾಗೂ ವೃತ್ತಿಯಲ್ಲಿ ವೈದ್ಯರಾದರೂ ಕೂಡಾ, ಸಾಹಿತ್ಯದಲ್ಲಿ ಅಭಿರುಚಿಯನ್ನು ಹೊಂದಿ, ಕಲಾಕ್ಷೇತ್ರದಲ್ಲಿ ಸಾಕಷ್ಟು ಪಳಗಿರುವ ಬೆಂಗಳೂರಿನ ಶೇಖರ್ ಹಾಸ್ಪಿಟಲಿನ ಸಂಸ್ಥಾಪಕ ನಿರ್ದೇಶಕರಾಗಿರುವ ಡಾ. ಪಿ.ವಿ.ಐತಾಳರು, ಹಾಗೂ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಸಕ್ರಿಯ ಕಾರ್ಯದರ್ಶಿಯೂ , ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರೂ ಆದ ಶ್ರೀ ರಾಜಶೇಖರ್ ಹೆಬ್ಬಾರ್ ಅವರು ಪಾಲುಗೊಳ್ಳಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ತದನಂತರ ತಂಡದ ಕಲಾವಿದರಿಂದ ‘ಭೀಷ್ಮ ಪ್ರತಿಜ್ಞೆ’ ಎನ್ನುವ ಕಥಾನಕವು ಪ್ರದರ್ಶನಗೊಳ್ಳಲಿದೆ ಎಂದು ಯಕ್ಷಗಾನ ಗುರುಗಳಾದ ಶ್ರೀ ಕೃಷ್ಣಮೂರ್ತಿ ತುಂಗರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
