ಗಣರಾಜ್ಯೋತ್ಸವದ ಪ್ರಯುಕ್ತ, ಬೆಂಗಳೂರಿನ ಯಕ್ಷ ಕಲಾ ಅಕಾಡೆಮಿಯು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 72ನೇ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಯಕ್ಷ ಕಲಾ ಅಕಾಡೆಮಿಯ ಆವರಣದಲ್ಲಿ ” ಶ್ರೀ ರಾಮ ಪಟ್ಟಾಭಿಷೇಕ ” ಎಂಬ ಪೌರಾಣಿಕ ಪ್ರಸಂಗದ ತಾಳಮದ್ದಳೆಯನ್ನು ಸಂಸ್ಥೆಯ ಕಲಾವಿದರು ನಡೆಸಿಕೊಡಲಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಭಾಗವತಿಕೆಯಲ್ಲಿ, ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ, ಗುರು ಕೋಟ ಕೃಷ್ಣ ಮೂರ್ತಿ ತುಂಗ, ಹಾಗೂ ಕುಮಾರಿ ಚಿತ್ಕಲಾ ಕೆ. ತುಂಗ, ಮದ್ದಳೆಯಲ್ಲಿ ಚಿನ್ಮಯ್ ಅಂಬರಗೊಡ್ಲು, ರಾಘು ಶರ್ಮಾ, ಮುಮ್ಮೇಳದಲ್ಲಿ, ರವಿ ಮಡೋಡಿ, ಮನೋಜ್ ಭಟ್, ಆದಿತ್ಯ ಉಡುಪ, ಶಶಾಂಕ್ ಕಾಶಿ, ಪ್ರದೀಪ ಮಧ್ಯಸ್ಥ,ಆದಿತ್ಯ ಹೊಳ್ಳ, ಸುಹಾಸ ಕರಬ, ಸದಾಶಿವ ತುಂಗ, ಶ್ರೀ ನಿಧಿ ಎಂ.ಎಸ್., ವಾಸುದೇವ, ಶ್ರೀಮತಿ ಅರ್ಚನಾ, ಶ್ರೀಮತಿ ಚೇತನಾರವರು ಭಾಗವಹಿಸಲಿದ್ದಾರೆ ಎಂದು ಯಕ್ಷ ಕಲಾ ಅಕಾಡೆಮಿಯ ಕಾರ್ಯದರ್ಶಿ ಕೆ.ಅನಸೂಯಾರವರು ತಿಳಿಸಿದ್ದಾರೆ. ಸರಕಾರದ ಕೋವಿಡ್ ನಿಯಮಗಳನ್ನು ಅನುಸರಿಸಿ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.