ದೆಹಲಿ ಕನ್ನಡಿಗ, ತುಳುವೆರ್ ಪತ್ರಿಕೆಗಳ ಸಂಪಾದಕ ಬಾ. ಸಾಮಗ ಅವರು ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾ ಸಂಘ ಜ.23 ರಂದು ಉಡುಪಿ ಕೆಳಾರ್ಕಳಬೆಟ್ಟಿನಲ್ಲಿ ಏರ್ಪಡಿಸಿದ 13ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಘದ ಗೌರವಾಧ್ಯಕ್ಷ ದಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುರು ಬಡಾನಿಡಿಯೂರು ಕೇಶವ ರಾವ್ ಅವರನ್ನು ಸನ್ಮಾನಿಸಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಉದ್ಯಮಿ ಆನಂದ ಎಂ. ಅಮೀನ್ ಸಾಮಾಜಿಕ ಸೇವಾ ಕಾರ್ಯಕರ್ತ ಮಂಜುನಾಥ ಹೆಬ್ಬಾರ್, ದೇವಸ್ಥಾನದ ಅಧ್ಯಕ್ಷ ಸದಾನಂದ ನಾಯ್ಕ್, ಸಂಘದ ಅಧ್ಯಕ್ಷ ಶೇಷರಾಜ ರಾವ್ ಶುಭ ಹಾರೈಸಿದರು. ಉದ್ಯಮಿ ಕೆ. ಅನಂತ ಸಾಮಗ, ಸಂಘಟಕ ಎಸ್. ಜಯರಾಮಯ್ಯ, ವೇಷದಾರಿ ಎಂ.ಕೆ. ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು. ರವಿನಂದನ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಅಭಿಮನ್ಯು ಕಾಳಗ, ಸೈಂಧವ ವಧೆ, ರತಿ ಕಲ್ಯಾಣ ಪ್ರಸಂಗಗಳ ಪ್ರದರ್ಶನ ನಡೆಯಿತು.
