31.01.2021ರ ಆದಿತ್ಯವಾರ ಬೆಳಗ್ಗೆ ೧೦ ಘಂಟೆಗೆ ಸರಿಯಾಗಿ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ ನಡೆಯಲಿದೆ. ಯಕ್ಷಗಾನ ಮತ್ತು ಇನ್ನಿತರ ಕಲಾ ಪ್ರಾಕಾರಗಳ ನಿರಂತರ ಅಧ್ಯಯನದ ಸದುದ್ದೇಶಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಈ ಬೃಹತ್ ಸಾಂಸ್ಕೃತಿಕ ಭವನಕ್ಕೆ ಎಲ್ಲಾ ಪ್ರದೇಶಗಳ ಸಹಭಾಗಿತ್ವವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ನಡೆಯುತ್ತಿದೆ.

ಈ ಸಮಾಲೋಚನಾ ಸಭೆಯಲ್ಲಿ ಶ್ರೀ ಹರಿಕೃಷ್ಣ ಪುನರೂರು, ಡಾ. ಎಂ. ಮೋಹನ ಆಳ್ವ, ಶ್ರೀ ಶ್ರೀಪತಿ ಭಟ್, ಶ್ರೀ ಅಭಯಚಂದ್ರ ಜೈನ್, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಎಂ. ಶಾಂತಾರಾಮ ಕುಡ್ವ, ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಪ್ರೇಮನಾಥ ಮಾರ್ಲ, ಪ್ರೊ| ಸದಾಶಿವ ಶೆಟ್ಟಿಗಾರ್, ಶ್ರೀ ಸದಾಶಿವ ರಾವ್ ಮೊದಲಾದ ಗಣ್ಯರು ಭಾಗವಹಿಸಲಿರುವರು. ಸಮಾಲೋಚನಾ ಸಭೆಯ ನಂತರ ಪ್ರಸಿದ್ಧ ಕಲಾವಿದರಿಂದ ‘ಶಲ್ಯ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES