31.01.2021ರ ಆದಿತ್ಯವಾರ ಬೆಳಗ್ಗೆ ೧೦ ಘಂಟೆಗೆ ಸರಿಯಾಗಿ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ ನಡೆಯಲಿದೆ. ಯಕ್ಷಗಾನ ಮತ್ತು ಇನ್ನಿತರ ಕಲಾ ಪ್ರಾಕಾರಗಳ ನಿರಂತರ ಅಧ್ಯಯನದ ಸದುದ್ದೇಶಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಈ ಬೃಹತ್ ಸಾಂಸ್ಕೃತಿಕ ಭವನಕ್ಕೆ ಎಲ್ಲಾ ಪ್ರದೇಶಗಳ ಸಹಭಾಗಿತ್ವವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ನಡೆಯುತ್ತಿದೆ.

ಈ ಸಮಾಲೋಚನಾ ಸಭೆಯಲ್ಲಿ ಶ್ರೀ ಹರಿಕೃಷ್ಣ ಪುನರೂರು, ಡಾ. ಎಂ. ಮೋಹನ ಆಳ್ವ, ಶ್ರೀ ಶ್ರೀಪತಿ ಭಟ್, ಶ್ರೀ ಅಭಯಚಂದ್ರ ಜೈನ್, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಎಂ. ಶಾಂತಾರಾಮ ಕುಡ್ವ, ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಪ್ರೇಮನಾಥ ಮಾರ್ಲ, ಪ್ರೊ| ಸದಾಶಿವ ಶೆಟ್ಟಿಗಾರ್, ಶ್ರೀ ಸದಾಶಿವ ರಾವ್ ಮೊದಲಾದ ಗಣ್ಯರು ಭಾಗವಹಿಸಲಿರುವರು. ಸಮಾಲೋಚನಾ ಸಭೆಯ ನಂತರ ಪ್ರಸಿದ್ಧ ಕಲಾವಿದರಿಂದ ‘ಶಲ್ಯ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
