31.01.2021ರ ಆದಿತ್ಯವಾರ ಬೆಳಗ್ಗೆ ೧೦ ಘಂಟೆಗೆ ಸರಿಯಾಗಿ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನ ನಿರ್ಮಾಣದ ಸಮಾಲೋಚನಾ ಸಭೆ ಮತ್ತು ‘ಶಲ್ಯ ಸಾರಥ್ಯ’ ತಾಳಮದ್ದಳೆ ನಡೆಯಲಿದೆ. ಯಕ್ಷಗಾನ ಮತ್ತು ಇನ್ನಿತರ ಕಲಾ ಪ್ರಾಕಾರಗಳ ನಿರಂತರ ಅಧ್ಯಯನದ ಸದುದ್ದೇಶಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಈ ಬೃಹತ್ ಸಾಂಸ್ಕೃತಿಕ ಭವನಕ್ಕೆ ಎಲ್ಲಾ ಪ್ರದೇಶಗಳ ಸಹಭಾಗಿತ್ವವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸಮಾಲೋಚನಾ ಸಭೆ ನಡೆಯುತ್ತಿದೆ.

ಈ ಸಮಾಲೋಚನಾ ಸಭೆಯಲ್ಲಿ ಶ್ರೀ ಹರಿಕೃಷ್ಣ ಪುನರೂರು, ಡಾ. ಎಂ. ಮೋಹನ ಆಳ್ವ, ಶ್ರೀ ಶ್ರೀಪತಿ ಭಟ್, ಶ್ರೀ ಅಭಯಚಂದ್ರ ಜೈನ್, ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಶ್ರೀ ಎಂ. ಶಾಂತಾರಾಮ ಕುಡ್ವ, ಶ್ರೀ ಸುಬ್ರಹ್ಮಣ್ಯ ಭಟ್, ಶ್ರೀ ಪ್ರೇಮನಾಥ ಮಾರ್ಲ, ಪ್ರೊ| ಸದಾಶಿವ ಶೆಟ್ಟಿಗಾರ್, ಶ್ರೀ ಸದಾಶಿವ ರಾವ್ ಮೊದಲಾದ ಗಣ್ಯರು ಭಾಗವಹಿಸಲಿರುವರು. ಸಮಾಲೋಚನಾ ಸಭೆಯ ನಂತರ ಪ್ರಸಿದ್ಧ ಕಲಾವಿದರಿಂದ ‘ಶಲ್ಯ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
