ಕಾಟುಕುಕ್ಕೆ ಭಜನಾ ಚಾರಿಟೆಬಲ್ ಟ್ರಸ್ಟ್(ರಿ) ಎಂಬುದು ಆಸ್ತಿಕ ಬಾಂಧವರೆಲ್ಲರಿಗೂ ಪರಿಚಿತವಾದ ಹೆಸರು. ದೇವರ ಭಜನೆ ಹಾಡುಗಳ ಗಾಯನ ಪ್ರಪಂಚದಲ್ಲಿ ಈ ಟ್ರಸ್ಟ್ ಕ್ರಾಂತಿಯನ್ನೇ ಎಬ್ಬಿಸಿದೆ ಎಂದರೆ ಅತಿಶಯೋಕ್ತಿಯಾಗಲಾರದು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಕಾಟುಕುಕ್ಕೆ ಎಂದ ಕೂಡಲೇ ನಮಗೆ ನೆನಪಾಗುವುದು ಅಪ್ರತಿಮ ಗಾಯಕ ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಹೆಸರು. ಅವರ ಹಾಡುಗಳನ್ನು ಕೇಳದ ಕನ್ನಡಿಗ ಸಂಗೀತ ಪ್ರೇಮಿಗಳಿರಲಿಕ್ಕಿಲ್ಲ. ಅಂತಹ ಗಾಯಕರೊಬ್ಬರು ತಮ್ಮ ಭಜನಾ ಸಂಕೀರ್ತನೆಗಳಿಗೂ ನಾಡಿನಾದ್ಯಂತ ಹೆಸರನ್ನು ಗಳಿಸಿದ್ದಾರೆ.
ಮಧ್ವಾಧೀಶ ಶ್ರೀ ವಿಠಲ ದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆಯವರ ಮಾರ್ಗದರ್ಶನದೊಂದಿಗೆ ಇಂದು ಹಲವಾರು ಭಜನಾ ಸಂಘಗಳು ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಕೊಡುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಾಟುಕುಕ್ಕೆ ಭಜನಾ ಚಾರಿಟೆಬಲ್ ಟ್ರಸ್ಟ್ ನ ತಂಡಗಳ ಭಜನಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ‘ಕಾಟುಕುಕ್ಕೆ ಭಜನಾ ಚಾರಿಟೆಬಲ್ ಟ್ರಸ್ಟ್’ ನ ಸುಮಾರು 130ಕ್ಕೂ ಹೆಚ್ಚು ಭಜನಾ ತಂಡಗಳು ಭಜನಾ ಗಾಯನದ ಪ್ರಸ್ತುತಿಯನ್ನು ಮಾಡುತ್ತಿವೆ.
ಇತ್ತೀಚೆಗೆ ಅಂದರೆ ಜ.14ರಿಂದ ಜ.17ರ ತನಕ ಸಿದ್ಧಾಪುರ ಬಾನ್ಕುಳಿಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಗೋವುಗಳ ವಿಹಂಗಮ ತಾಣ ಗೋಸ್ವರ್ಗದಲ್ಲಿ ನಡೆದ ‘ಗೋದಿನ’ ಮತ್ತು ‘ಆಲೆಮನೆ ಹಬ್ಬ’ದ ಸಂದರ್ಭದಲ್ಲಿ ಕಾಟುಕುಕ್ಕೆ ಭಜನಾ ಚ್ಯಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಗೋಸಂಕೀರ್ತನ ಕಾರ್ಯಕ್ರಮ ವಿಶಿಷ್ಟವಾಗಿ ಜರಗಿತ್ತು ಎಂಬುದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ