ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) ಇಂದು (01-02-2021) ನಿಧನರಾದರು. ಅವರು ಪತ್ನಿ, ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
40 ವರ್ಷಗಳ ಕಾಲ ರಂಗಸ್ಥಳದಲ್ಲಿ ತಿಟ್ಟು ಬೇಧವಿಲ್ಲದೇ ಕಲಾ ವ್ಯವಸಾಯ ಮಾಡಿದ ಕಲಾ ‘ಕೃಷಿಕ’ ವಂಡ್ಸೆ ನಾರಾಯಣ ಗಾಣಿಗರ ಕಲಾ ಸಾಧನೆಯ ಕಿರೀಟಕ್ಕೆ 2014ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.
ಸಂಸ್ಥೆ ತನ್ನ ರಜತ ಸಂಭ್ರಮದ ಸಂದರ್ಭದಲ್ಲಿ ಅವರನ್ನು ಗೌರವಿಸಿತ್ತು. ತನ್ನ12ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟ ನಾರಾಯಣ ಗಾಣಿಗರು ಬಹುಬೇಗ ಪ್ರಸಿದ್ಧಿಯ ಪಥವೇರಿದರು. ಸ್ತ್ರೀ ಭೂಮಿಕೆಯಲ್ಲಿ ಹಲವಾರು ಪೌರಾಣಿಕ ಪ್ರಸಂಗಗಳ ಪಾತ್ರಕ್ಕೆ ಸುಭದ್ರವಾದ ತಳಹದಿ ಒದಗಿಸಿದ ಕೀರ್ತಿ ಇವರದ್ದು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಕುಂಡಾವು, ಕೂಡ್ಲು, ಸುರತ್ಕಲ್, ಇಡಗುಂಜಿ ಮೊದಲಾದ ಮೇಳಗಳಲ್ಲಿ ನಾಲ್ಕೂವರೆ ದಶಕಗಳ ಕಾಲ ಕಲಾಸೇವೆಗೈದಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಸ್ವರದ ಮಾರ್ಧವತೆ ಮೂಲಕ ಹಾವ-ಭಾವ, ಒನಪು-ಒಯ್ಯಾರದ ಪ್ರಕಾಷ್ಠ ಪ್ರತಿಭೆ, ಶೃಂಗಾರ ಕರುಣಾ, ಭಕ್ತಿ ರಸಗಳಲ್ಲಿ ಇವರ ಅಭಿನಯ ಅನುಪಮ. ಮೋಹಿನಿ, ಶಿವೆ, ಸುಶೀಲೆ, ರೂಪರೇಖಾ, ಪ್ರಭಾವತಿ ಪಾತ್ರಗಳು ಹೆಣ್ಣನ್ನೇ ನಾಚಿಸಿವೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷಎಮ್.ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
