Sunday, October 6, 2024
Homeಯಕ್ಷಗಾನಸಾಧು ಕೊಠಾರಿ ಪತ್ನಿಗೆ ವಿಮಾ ಮೊತ್ತ ಹಸ್ತಾಂತರ

ಸಾಧು ಕೊಠಾರಿ ಪತ್ನಿಗೆ ವಿಮಾ ಮೊತ್ತ ಹಸ್ತಾಂತರ

ಯಕ್ಷಗಾನ ಕಲಾರಂಗ 16 ವರ್ಷಗಳ ಹಿಂದೆ ಕಲಾವಿದರಿಗಾಗಿ ಆರಂಬಿಸಿದ ‘ಜೀವನ ಆನಂದ’ ವಿಮೆಯ ಪಾಲಸಿದಾರರಾದ ಮಂದಾರ್ತಿ ಮೇಳದ ಕಲಾವಿದರಾದ ಸಾಧು ಕೊಠಾರಿಯವರು ಇತ್ತೀಚೆಗೆ ಮೇಳದ ಚೌಕಿಯಲ್ಲಿ ನಿಧನಹೊಂದಿದ್ದು, ಅವರ ವಿಮಾ ಮೊತ್ತ 1 ಲಕ್ಷರೂ, ಜತೆಗೆ ಬೋನಸ್ 65 ಸಾವಿರ ರೂಪಾಯಿಯನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್‍ ಸಾಧು ಕೊಠಾರಿಯವರ ಪತ್ನಿ ಶಕುಂತಲಾ ಕೊಠಾರಿಯವರಿಗೆ ಹಸ್ತಾಂತರಿಸಿದರು.

ವಾರ್ಷಿಕ ಪ್ರೀಮಿಯಮ್‍ನ ಭಾಗಶಃ ಹಣವನ್ನು ಸಂಸ್ಥೆ ನೀಡುತ್ತಾ ಬಂದಿದ್ದು, 53 ಕಲಾವಿದರು ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರೊಂದಿಗೆ ನೆರವಿನ ರೂಪದಲ್ಲಿ ಸಂಸ್ಥೆಯ ವತಿಯಿಂದ 20 ಸಾವಿರ ರೂಪಾಯಿಯನ್ನು ಫೆಬ್ರವರಿ 08, 2021ರಂದು ಕಲಾರಂಗದ ಕಛೇರಿಯಲ್ಲಿ ನೀಡಿ ನೊಂದ ಕುಟುಂಬವನ್ನು ಸಂತೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಮನೋಹರ ಕೆ., ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಹಾಗೂ ಸಾಧು ಕೊಠಾರಿಯವರ ಪುತ್ರಿ ಮಾಧುರಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments