ಯಕ್ಷಗಾನ ಕಲಾರಂಗ 16 ವರ್ಷಗಳ ಹಿಂದೆ ಕಲಾವಿದರಿಗಾಗಿ ಆರಂಬಿಸಿದ ‘ಜೀವನ ಆನಂದ’ ವಿಮೆಯ ಪಾಲಸಿದಾರರಾದ ಮಂದಾರ್ತಿ ಮೇಳದ ಕಲಾವಿದರಾದ ಸಾಧು ಕೊಠಾರಿಯವರು ಇತ್ತೀಚೆಗೆ ಮೇಳದ ಚೌಕಿಯಲ್ಲಿ ನಿಧನಹೊಂದಿದ್ದು, ಅವರ ವಿಮಾ ಮೊತ್ತ 1 ಲಕ್ಷರೂ, ಜತೆಗೆ ಬೋನಸ್ 65 ಸಾವಿರ ರೂಪಾಯಿಯನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಸಾಧು ಕೊಠಾರಿಯವರ ಪತ್ನಿ ಶಕುಂತಲಾ ಕೊಠಾರಿಯವರಿಗೆ ಹಸ್ತಾಂತರಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ವಾರ್ಷಿಕ ಪ್ರೀಮಿಯಮ್ನ ಭಾಗಶಃ ಹಣವನ್ನು ಸಂಸ್ಥೆ ನೀಡುತ್ತಾ ಬಂದಿದ್ದು, 53 ಕಲಾವಿದರು ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರೊಂದಿಗೆ ನೆರವಿನ ರೂಪದಲ್ಲಿ ಸಂಸ್ಥೆಯ ವತಿಯಿಂದ 20 ಸಾವಿರ ರೂಪಾಯಿಯನ್ನು ಫೆಬ್ರವರಿ 08, 2021ರಂದು ಕಲಾರಂಗದ ಕಛೇರಿಯಲ್ಲಿ ನೀಡಿ ನೊಂದ ಕುಟುಂಬವನ್ನು ಸಂತೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಮನೋಹರ ಕೆ., ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಹಾಗೂ ಸಾಧು ಕೊಠಾರಿಯವರ ಪುತ್ರಿ ಮಾಧುರಿ ಉಪಸ್ಥಿತರಿದ್ದರು.
