ಪ್ರಖ್ಯಾತ ಯಕ್ಷಗಾನ ವೇಷದಾರಿ ಯಕ್ಷಗಾನ ರಂಗಸ್ಥಳದ ಅಭಿಮನ್ಯು ಎಂದೇ ಖ್ಯಾತರಾಗಿದ್ದ ಪುತ್ತೂರು ಶ್ರೀಧರ ಭಂಡಾರಿಯವರ ನಿಧನಕ್ಕೆ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ (ರಿ.,) ದೇಲಂಪಾಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಗಲಿದ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತಮ್ಮ ಸಂತಾಪ ಸೂಚನೆಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಮತ್ತು ಸಾಹಿತಿ, ವಿದ್ವಾಂಸ ಡಾ. ರಮಾನಂದ ಬನಾರಿ ಮತ್ತು ಹಾಗೂ ಸಂಘದ ಸರ್ವಸದಸ್ಯರು
“ಯಕ್ಷಗಾನದ ಅಗ್ರಮಾನ್ಯ ವೇಷಧಾರಿ ವಿದ್ಯಾವಿನಯ ಸಂಪನ್ನ ಕಲಾವಿದ ಶ್ರೀಧರ ಭಂಡಾರಿಯವರು ರಂಗಸ್ಥಳದಿಂದ ಶಾಶ್ವತವಾಗಿ ನಿರ್ಗಮಿಸಿದ ವಾರ್ತೆ ಅತ್ಯಂತ ವಿಷಾದವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇವೆ. ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲೆಂದು ಪ್ರಾರ್ಥಿಸುತ್ತೇವೆ. ಅವರ ಕೀರ್ತಿ ಚಿರಕಾಲ ಉಳಿಯಲಿ.” ಎಂದು ಪ್ರಾರ್ಥಿಸಿದ್ದಾರೆ.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
