Friday, September 20, 2024
Homeಇಂದಿನ ಕಾರ್ಯಕ್ರಮಇಂದು ಪುತ್ತೂರಿನಲ್ಲಿ ಯಕ್ಷಗಾನ - ಸಾಲಿಗ್ರಾಮ ಮೇಳದವರಿಂದ 'ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ' 

ಇಂದು ಪುತ್ತೂರಿನಲ್ಲಿ ಯಕ್ಷಗಾನ – ಸಾಲಿಗ್ರಾಮ ಮೇಳದವರಿಂದ ‘ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ’ 

ಇಂದು, ಫೆಬ್ರವರಿ 28 ಆದಿತ್ಯವಾರ ಸಂಜೆ 6.30ಕ್ಕೆ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಪರ್ಲಡ್ಕದ ಖ್ಯಾತ ವೈದ್ಯ ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಆವರಣದಲ್ಲಿ ಸಾಲಿಗ್ರಾಮ ಮೇಳದವರು ‘ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ.

ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಕಳೆದ 16 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ.  ಈ ವರ್ಷದ ಕಾರ್ಯಕ್ರಮ ಇಂದಿನಿಂದ ಅಂದರೆ ಫೆಬ್ರವರಿ 27ರಿಂದ ಆರಂಭವಾಗಲಿದ್ದು ಮಾರ್ಚ್ 1ರ ವರೆಗೆ ನಡೆಯಲಿದೆ.

ಕೊನೆಯ ದಿನ ಮಾರ್ಚ್ 1, ಸೋಮವಾರದಂದು ಸಂಜೆ 6.30ಕ್ಕೆ ತೆಂಕುತಿಟ್ಟಿನ ಯಕ್ಷಗಾನ ಕಾರ್ಯಕ್ರಮ ಇರುತ್ತದೆ. ಹನುಮಗಿರಿ ಮೇಳದವರಿಂದ ‘ಶುಕ್ರನಂದನೆ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments