ಇಂದು, ಫೆಬ್ರವರಿ 28 ಆದಿತ್ಯವಾರ ಸಂಜೆ 6.30ಕ್ಕೆ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಪರ್ಲಡ್ಕದ ಖ್ಯಾತ ವೈದ್ಯ ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಆವರಣದಲ್ಲಿ ಸಾಲಿಗ್ರಾಮ ಮೇಳದವರು ‘ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ.
ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಕಳೆದ 16 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಈ ವರ್ಷದ ಕಾರ್ಯಕ್ರಮ ಇಂದಿನಿಂದ ಅಂದರೆ ಫೆಬ್ರವರಿ 27ರಿಂದ ಆರಂಭವಾಗಲಿದ್ದು ಮಾರ್ಚ್ 1ರ ವರೆಗೆ ನಡೆಯಲಿದೆ.
ಕೊನೆಯ ದಿನ ಮಾರ್ಚ್ 1, ಸೋಮವಾರದಂದು ಸಂಜೆ 6.30ಕ್ಕೆ ತೆಂಕುತಿಟ್ಟಿನ ಯಕ್ಷಗಾನ ಕಾರ್ಯಕ್ರಮ ಇರುತ್ತದೆ. ಹನುಮಗಿರಿ ಮೇಳದವರಿಂದ ‘ಶುಕ್ರನಂದನೆ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ