ಇಂದು, ಫೆಬ್ರವರಿ 28 ಆದಿತ್ಯವಾರ ಸಂಜೆ 6.30ಕ್ಕೆ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪುತ್ತೂರಿನ ಪರ್ಲಡ್ಕದ ಖ್ಯಾತ ವೈದ್ಯ ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಆವರಣದಲ್ಲಿ ಸಾಲಿಗ್ರಾಮ ಮೇಳದವರು ‘ಚಿತ್ರಾಕ್ಷಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ.
ಡಾ. ಹರಿಕೃಷ್ಣ ಪಾಣಾಜೆಯವರ ಎಸ್.ಡಿ.ಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಕಳೆದ 16 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಈ ವರ್ಷದ ಕಾರ್ಯಕ್ರಮ ಇಂದಿನಿಂದ ಅಂದರೆ ಫೆಬ್ರವರಿ 27ರಿಂದ ಆರಂಭವಾಗಲಿದ್ದು ಮಾರ್ಚ್ 1ರ ವರೆಗೆ ನಡೆಯಲಿದೆ.
ಕೊನೆಯ ದಿನ ಮಾರ್ಚ್ 1, ಸೋಮವಾರದಂದು ಸಂಜೆ 6.30ಕ್ಕೆ ತೆಂಕುತಿಟ್ಟಿನ ಯಕ್ಷಗಾನ ಕಾರ್ಯಕ್ರಮ ಇರುತ್ತದೆ. ಹನುಮಗಿರಿ ಮೇಳದವರಿಂದ ‘ಶುಕ್ರನಂದನೆ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
