ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ಧಿ ಪ್ರಯುಕ್ತ ಮಂಗಳೂರು ಸಮಿತಿ ವತಿಯಿಂದ ಸಪ್ತ ಕಾರ್ಯಕ್ರಮಗಳ ಆರಂಭೋತ್ಸವವನ್ನು ಮಂಗಳಾದೇವಿ ದೇವಸ್ಥಾನದ ಕಲಾಮಂಟಪದಲ್ಲಿ ಏರ್ಪಡಿಸಲಾಗಿತ್ತು.
ಈ ಸಂದರ್ಭ ಯಕ್ಷಾಂಗಣ ಮಂಗಳೂರು ಸಂಯೋಜನೆಯಲ್ಲಿ ‘ಶ್ರೀರಾಮ – ಹನುಮ’ ಯಕ್ಷಗಾನ ತಾಳಮದ್ದಳೆ ಜರಗಿತು.
ಹಿಮ್ಮೇಳದಲ್ಲಿ ಭವ್ಯಶ್ರೀ ಕುಲ್ಕುಂದ (ಭಾಗವತರು), ಕೃಷ್ಣ ಪ್ರಕಾಶ್ ಉಳಿತ್ತಾಯ (ಮೃದಂಗ), ಮಯೂರ್ ನಾಯಗ (ಚೆಂಡೆ) ಭಾಗವಹಿಸಿದ್ದರು.
ಅರ್ಥಧಾರಿಗಳಾಗಿ ಡಾ.ಎಂ. ಪ್ರಭಾಕರ ಜೋಶಿ (ಹನುಮಂತ), ಭಾಸ್ಕರ ರೈ ಕುಕ್ಕುವಳ್ಳಿ (ಶ್ರೀರಾಮ), ಜಬ್ಬಾರ್ ಸಮೋ ಸಂಪಾಜೆ (ಸುಗ್ರೀವ), ಕದ್ರಿ ನವನೀತ ಶೆಟ್ಟಿ (ವಿಶ್ವಾಮಿತ್ರ), ಡಾ.ದಿನಕರ ಎಸ್.ಪಚ್ಚನಾಡಿ (ಸೀತೆ), ಉಮೇಶ ಆಚಾರ್ಯ ಗೇರುಕಟ್ಟೆ (ನಾರದ) ಪಾಲ್ಗೊಂಡರು.
ಯಕ್ಷಾಂಗಣದ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳಕುಮಾರ್ ಕಲಾವಿದರನ್ನು ಪರಿಚಯಿಸಿದರು. ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ವಂದಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

