ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ದಿ-07/3/2021 ರವಿವಾರದಂದು ನಾಟ್ಯಸಂಪದ (ರಿ.) ಸಂಸ್ಥೆಯ ಯಕ್ಷಗಾನ ತರಗತಿಗಳ ಸಮಾರೋಪವು ಪದ್ಮನಾಭನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ನಡೆಯಿತು.
ಸಹಗುರುಗಳಾದ ಶ್ರೀ ಶಾಶ್ವತ ಹೆಗಡೆ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯರಾದ ಶ್ರೀ ಶ್ರೀನಿವಾಸ ಸಾಸ್ತಾನ ಇವರು ಅಧ್ಯಕ್ಷೀಯ ನುಡಿಗಳಲ್ಲಿ ಜೀವನದ ಉನ್ನತಿಗೆ ಕಲೆಯೆ ಆಧಾರ, ಕಲೆ ಜೀವನದ ಭಾಗವಾಗಿರಬೇಕು. ಶ್ರದ್ಧೆಯಿಂದಕಲಿತರೆ ಸಾಧನೆ ಸಾಧ್ಯ, ಕಲಿತ ಕಲೆಯನ್ನು ಇನ್ನೂ ಮುಂದುವರಿಸಿಕೊಂಡು ಹೋಗಬೇಕು ಎಂದರು.


ಮುಖ್ಯ ಅತಿಥಿಗಳಾದ ಶ್ರೀ ನಾಗರಾಜ ಹೆಗಡೆಯವರು ಯಕ್ಷಗಾನ ಕಲಿಸುವಿಕೆಯ ಹಿಂದಿನ ಶ್ರಮದ ಬಗ್ಗೆ ವಿವರಿಸಿದರು. ಶ್ರೀ ರವೀಶ ಹೆಗಡೆ ವಂದಿಸಿದರು. ಕುಮಾರ ಶಿವರಾಮ ಭಟ್ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳು ವೃಷಸೇನ ಕಾಳಗ ಎಂಬ ಆಖ್ಯಾನವನ್ನು ಪ್ರದರ್ಶಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
